ಬ್ರೇಕಿಂಗ್ ನ್ಯೂಸ್
13-07-21 02:19 pm Mangalore Correspondent ಕ್ರೈಂ
ಸುರತ್ಕಲ್, ಜು.13 : ಹಳೆಯಂಗಡಿ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠದಲ್ಲಿ ಸೋಮವಾರ ರಾತ್ರಿ ಕಳ್ಳತನ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ವಿಶ್ವಕರ್ಮ ಸಮುದಾಯದ ಹಳೆಯಂಗಡಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಗರ್ಭಗುಡಿಯ ಬೀಗ ಮುರಿದು ದೇವಿಯ ಬೆಳ್ಳಿ ಪ್ರಭಾವಳಿ, ಬೆಳ್ಳಿಯ ಕವಚ, ಮೂಗುತಿ ಸೇರಿದಂತೆ ಚಿನ್ನ-ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದಾರೆ. ಅದಲ್ಲದೆ ಗರ್ಭಗುಡಿಯ ಹೊರ ಬದಿಯಲ್ಲಿರುವ ಗಣಪತಿಯ ಗುಡಿಯ ಎರಡು ಬೀಗ ಒಡೆದು ಗಣಪತಿ ದೇವರ ಕವಚ, ಮತ್ತು ಪ್ರಭಾವಳಿ, ಚಿನ್ನದ ತಿಲಕ, ಕಾಣಿಕೆ ಡಬ್ಬಿ, ಶ್ರೀದೇವಿಯ ಗರ್ಭಗುಡಿ ಹೊರ ಬದಿಯ ಕಾಣಿಕೆ ಡಬ್ಬಿ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

ಸುಮಾರು ಏಳೂವರೆ ಕೆ.ಜಿ.ಯಷ್ಟು ಬೆಳ್ಳಿ ಹಾಗೂ 9 ಗ್ರಾಂನಷ್ಟು ಚಿನ್ನದ ಸೊತ್ತು ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಸೇರಿದಂತೆ ಸುಮಾರು 6 ಲಕ್ಷ ರೂ. ವರೆಗಿನ ಸೊತ್ತು ಕಳವಾಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇಂದು ಬೆಳಗ್ಗೆ ಅರ್ಚಕರು ಪೂಜೆಗೆಂದು ದೇವಳದ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಮಠದ ಹೊರ ಬದಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಮಠದ ಒಳಗಡೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves steal lakhs worth of Gold Monuments from Temple in Haleyangadi. Mulki police are now investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm