ಬ್ರೇಕಿಂಗ್ ನ್ಯೂಸ್
14-07-21 09:45 pm Mangaluru Correspondent ಕ್ರೈಂ
ಮಂಗಳೂರು, ಜುಲೈ 14: ಉರ್ವಾ ಠಾಣೆಗೆ ಬಂದಿದ್ದ ವ್ಯಕ್ತಿಗಳಿಬ್ಬರು ಪೊಲೀಸರ ಜೊತೆ ದುರ್ನಡತೆ ತೋರಿದ ಘಟನೆ ನಡೆದಿದ್ದು ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ನೋಯಲ್ ಸಿಕ್ವೇರಾ ಮತ್ತು ಜೊಹಾನ್ ಸಿಕ್ವೇರಾ ಬಂಧಿತರು. ನೋಯಲ್ ಸಿಕ್ವೇರಾ ಉರ್ವಾ ಸ್ಟೋರ್ ಬಳಿಯ ಚಿಲಿಂಬಿ ನಿವಾಸಿಯಾಗಿದ್ದು ಕಳೆದ ಮೇ ತಿಂಗಳಲ್ಲಿ ತನ್ನ ಅಪಾರ್ಟ್ಮೆಂಟ್ ವಿಚಾರದಲ್ಲಿ ಪೊಲೀಸ್ ದೂರು ನೀಡಿದ್ದರು. ಅಪಾರ್ಟ್ಮೆಂಟ್ ಅಸೋಸಿಯೇಷನ್ ಕಡೆಯಿಂದ ನೀರು ಕಡಿತ ಮಾಡಿದ ವಿಚಾರದಲ್ಲಿ ಜಟಾಪಟಿ ನಡೆದು ಬಳಿಕ ಎರಡೂ ಕಡೆಯಿಂದ ದೂರು - ಪ್ರತಿದೂರು ಸಲ್ಲಿಕೆ ಆಗಿತ್ತು.


ಇದೀಗ ಎರಡು ತಿಂಗಳ ನಂತರ ಅಪಾರ್ಟ್ಮೆಂಟ್ ಜಟಾಪಟಿ ವಿಚಾರ ಇತ್ಯರ್ಥ ಆಗಿದೆ ಎನ್ನಲಾಗುತ್ತಿದ್ದು ಇಂದು ನೋಯಲ್ ಸಿಕ್ವೇರಾ ಉರ್ವಾ ಠಾಣೆಗೆ ದೂರು ಹಿಂಪಡೆಯುವುದಕ್ಕಾಗಿ ತೆರಳಿದ್ದರು. ಈ ವೇಳೆ, ಸಾಮಾಜಿಕ ಕಾರ್ಯಕರ್ತನೆಂದು ಗುರುತಿಸ್ಕೊಂಡಿರುವ ಜೊಹಾನ್ ಸಿಕ್ವೇರಾ ಕೂಡ ನೋಯಲ್ ಜೊತೆಗೆ ಠಾಣೆಗೆ ತೆರಳಿದ್ದರು ಎನ್ನಲಾಗಿದೆ. ಠಾಣೆಯಲ್ಲಿ ಇದೇ ವಿಚಾರದಲ್ಲಿ ಮಾತುಕತೆ ನಡೆದಿದ್ದು ಜೊಹಾನ್ ಸಿಕ್ವೇರಾ ಪೊಲೀಸರ ಜೊತೆ ಮಾತನಾಡುತ್ತಿದ್ದ ವೇಳೆ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಮೊಬೈಲ್ ಕಿತ್ತುಕೊಂಡಿದ್ದಾರೆ.
ಈ ವೇಳೆ,ಜೊಹಾನ್ ಸಿಕ್ವೇರಾ ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಪೊಲೀಸರು ಹೇಳುವ ಪ್ರಕಾರ, ಜಾನ್ ಮತ್ತು ನೋಯಲ್ ಇಬ್ಬರೂ ಅಲ್ಲಿನ ಸಿಬಂದಿ ಜೊತೆ ದುರ್ನಡತೆ ತೋರಿದ್ದಾರೆ. ಈ ವೇಳೆ ಒಬ್ಬರು ಮಹಿಳಾ ಸಿಬಂದಿ ಪೂಜಾ ಹಿರೇಮಠ ಮತ್ತು ಇನ್ನೊಬ್ಬ ಹೆಡ್ ಕಾನ್ಸ್ ಟೇಬಲ್ ನಾರಾಯಣ ಎಂಬವರಿಗೆ ಗಾಯಗಳಾಗಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ನೋಯಲ್ ಮತ್ತು ಜೊಹಾನ್ ಸಿಕ್ವೇರಾನನ್ನು ಬಂಧಿಸಿದ್ದಾರೆ. ಹೀಗಾಗಿ ಕೇಸು ಹಿಂಪಡೆಯಲು ಹೋದವರು ಜೈಲು ಸೇರುವಂತಾಗಿದೆ.
Two including activist Johan Sequeira taken to custody for assault on two police constables at Urwa Police Station. Narayana and Pooja have been admitted to Wenlock hospital in Mangalore.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm