ಬ್ರೇಕಿಂಗ್ ನ್ಯೂಸ್
14-07-21 09:45 pm Mangaluru Correspondent ಕ್ರೈಂ
ಮಂಗಳೂರು, ಜುಲೈ 14: ಉರ್ವಾ ಠಾಣೆಗೆ ಬಂದಿದ್ದ ವ್ಯಕ್ತಿಗಳಿಬ್ಬರು ಪೊಲೀಸರ ಜೊತೆ ದುರ್ನಡತೆ ತೋರಿದ ಘಟನೆ ನಡೆದಿದ್ದು ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ನೋಯಲ್ ಸಿಕ್ವೇರಾ ಮತ್ತು ಜೊಹಾನ್ ಸಿಕ್ವೇರಾ ಬಂಧಿತರು. ನೋಯಲ್ ಸಿಕ್ವೇರಾ ಉರ್ವಾ ಸ್ಟೋರ್ ಬಳಿಯ ಚಿಲಿಂಬಿ ನಿವಾಸಿಯಾಗಿದ್ದು ಕಳೆದ ಮೇ ತಿಂಗಳಲ್ಲಿ ತನ್ನ ಅಪಾರ್ಟ್ಮೆಂಟ್ ವಿಚಾರದಲ್ಲಿ ಪೊಲೀಸ್ ದೂರು ನೀಡಿದ್ದರು. ಅಪಾರ್ಟ್ಮೆಂಟ್ ಅಸೋಸಿಯೇಷನ್ ಕಡೆಯಿಂದ ನೀರು ಕಡಿತ ಮಾಡಿದ ವಿಚಾರದಲ್ಲಿ ಜಟಾಪಟಿ ನಡೆದು ಬಳಿಕ ಎರಡೂ ಕಡೆಯಿಂದ ದೂರು - ಪ್ರತಿದೂರು ಸಲ್ಲಿಕೆ ಆಗಿತ್ತು.
ಇದೀಗ ಎರಡು ತಿಂಗಳ ನಂತರ ಅಪಾರ್ಟ್ಮೆಂಟ್ ಜಟಾಪಟಿ ವಿಚಾರ ಇತ್ಯರ್ಥ ಆಗಿದೆ ಎನ್ನಲಾಗುತ್ತಿದ್ದು ಇಂದು ನೋಯಲ್ ಸಿಕ್ವೇರಾ ಉರ್ವಾ ಠಾಣೆಗೆ ದೂರು ಹಿಂಪಡೆಯುವುದಕ್ಕಾಗಿ ತೆರಳಿದ್ದರು. ಈ ವೇಳೆ, ಸಾಮಾಜಿಕ ಕಾರ್ಯಕರ್ತನೆಂದು ಗುರುತಿಸ್ಕೊಂಡಿರುವ ಜೊಹಾನ್ ಸಿಕ್ವೇರಾ ಕೂಡ ನೋಯಲ್ ಜೊತೆಗೆ ಠಾಣೆಗೆ ತೆರಳಿದ್ದರು ಎನ್ನಲಾಗಿದೆ. ಠಾಣೆಯಲ್ಲಿ ಇದೇ ವಿಚಾರದಲ್ಲಿ ಮಾತುಕತೆ ನಡೆದಿದ್ದು ಜೊಹಾನ್ ಸಿಕ್ವೇರಾ ಪೊಲೀಸರ ಜೊತೆ ಮಾತನಾಡುತ್ತಿದ್ದ ವೇಳೆ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಮೊಬೈಲ್ ಕಿತ್ತುಕೊಂಡಿದ್ದಾರೆ.
ಈ ವೇಳೆ,ಜೊಹಾನ್ ಸಿಕ್ವೇರಾ ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಪೊಲೀಸರು ಹೇಳುವ ಪ್ರಕಾರ, ಜಾನ್ ಮತ್ತು ನೋಯಲ್ ಇಬ್ಬರೂ ಅಲ್ಲಿನ ಸಿಬಂದಿ ಜೊತೆ ದುರ್ನಡತೆ ತೋರಿದ್ದಾರೆ. ಈ ವೇಳೆ ಒಬ್ಬರು ಮಹಿಳಾ ಸಿಬಂದಿ ಪೂಜಾ ಹಿರೇಮಠ ಮತ್ತು ಇನ್ನೊಬ್ಬ ಹೆಡ್ ಕಾನ್ಸ್ ಟೇಬಲ್ ನಾರಾಯಣ ಎಂಬವರಿಗೆ ಗಾಯಗಳಾಗಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ನೋಯಲ್ ಮತ್ತು ಜೊಹಾನ್ ಸಿಕ್ವೇರಾನನ್ನು ಬಂಧಿಸಿದ್ದಾರೆ. ಹೀಗಾಗಿ ಕೇಸು ಹಿಂಪಡೆಯಲು ಹೋದವರು ಜೈಲು ಸೇರುವಂತಾಗಿದೆ.
Two including activist Johan Sequeira taken to custody for assault on two police constables at Urwa Police Station. Narayana and Pooja have been admitted to Wenlock hospital in Mangalore.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 12:47 pm
HK News Desk
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm