ಬ್ರೇಕಿಂಗ್ ನ್ಯೂಸ್
14-07-21 09:45 pm Mangaluru Correspondent ಕ್ರೈಂ
ಮಂಗಳೂರು, ಜುಲೈ 14: ಉರ್ವಾ ಠಾಣೆಗೆ ಬಂದಿದ್ದ ವ್ಯಕ್ತಿಗಳಿಬ್ಬರು ಪೊಲೀಸರ ಜೊತೆ ದುರ್ನಡತೆ ತೋರಿದ ಘಟನೆ ನಡೆದಿದ್ದು ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ನೋಯಲ್ ಸಿಕ್ವೇರಾ ಮತ್ತು ಜೊಹಾನ್ ಸಿಕ್ವೇರಾ ಬಂಧಿತರು. ನೋಯಲ್ ಸಿಕ್ವೇರಾ ಉರ್ವಾ ಸ್ಟೋರ್ ಬಳಿಯ ಚಿಲಿಂಬಿ ನಿವಾಸಿಯಾಗಿದ್ದು ಕಳೆದ ಮೇ ತಿಂಗಳಲ್ಲಿ ತನ್ನ ಅಪಾರ್ಟ್ಮೆಂಟ್ ವಿಚಾರದಲ್ಲಿ ಪೊಲೀಸ್ ದೂರು ನೀಡಿದ್ದರು. ಅಪಾರ್ಟ್ಮೆಂಟ್ ಅಸೋಸಿಯೇಷನ್ ಕಡೆಯಿಂದ ನೀರು ಕಡಿತ ಮಾಡಿದ ವಿಚಾರದಲ್ಲಿ ಜಟಾಪಟಿ ನಡೆದು ಬಳಿಕ ಎರಡೂ ಕಡೆಯಿಂದ ದೂರು - ಪ್ರತಿದೂರು ಸಲ್ಲಿಕೆ ಆಗಿತ್ತು.


ಇದೀಗ ಎರಡು ತಿಂಗಳ ನಂತರ ಅಪಾರ್ಟ್ಮೆಂಟ್ ಜಟಾಪಟಿ ವಿಚಾರ ಇತ್ಯರ್ಥ ಆಗಿದೆ ಎನ್ನಲಾಗುತ್ತಿದ್ದು ಇಂದು ನೋಯಲ್ ಸಿಕ್ವೇರಾ ಉರ್ವಾ ಠಾಣೆಗೆ ದೂರು ಹಿಂಪಡೆಯುವುದಕ್ಕಾಗಿ ತೆರಳಿದ್ದರು. ಈ ವೇಳೆ, ಸಾಮಾಜಿಕ ಕಾರ್ಯಕರ್ತನೆಂದು ಗುರುತಿಸ್ಕೊಂಡಿರುವ ಜೊಹಾನ್ ಸಿಕ್ವೇರಾ ಕೂಡ ನೋಯಲ್ ಜೊತೆಗೆ ಠಾಣೆಗೆ ತೆರಳಿದ್ದರು ಎನ್ನಲಾಗಿದೆ. ಠಾಣೆಯಲ್ಲಿ ಇದೇ ವಿಚಾರದಲ್ಲಿ ಮಾತುಕತೆ ನಡೆದಿದ್ದು ಜೊಹಾನ್ ಸಿಕ್ವೇರಾ ಪೊಲೀಸರ ಜೊತೆ ಮಾತನಾಡುತ್ತಿದ್ದ ವೇಳೆ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಮೊಬೈಲ್ ಕಿತ್ತುಕೊಂಡಿದ್ದಾರೆ.
ಈ ವೇಳೆ,ಜೊಹಾನ್ ಸಿಕ್ವೇರಾ ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಪೊಲೀಸರು ಹೇಳುವ ಪ್ರಕಾರ, ಜಾನ್ ಮತ್ತು ನೋಯಲ್ ಇಬ್ಬರೂ ಅಲ್ಲಿನ ಸಿಬಂದಿ ಜೊತೆ ದುರ್ನಡತೆ ತೋರಿದ್ದಾರೆ. ಈ ವೇಳೆ ಒಬ್ಬರು ಮಹಿಳಾ ಸಿಬಂದಿ ಪೂಜಾ ಹಿರೇಮಠ ಮತ್ತು ಇನ್ನೊಬ್ಬ ಹೆಡ್ ಕಾನ್ಸ್ ಟೇಬಲ್ ನಾರಾಯಣ ಎಂಬವರಿಗೆ ಗಾಯಗಳಾಗಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ನೋಯಲ್ ಮತ್ತು ಜೊಹಾನ್ ಸಿಕ್ವೇರಾನನ್ನು ಬಂಧಿಸಿದ್ದಾರೆ. ಹೀಗಾಗಿ ಕೇಸು ಹಿಂಪಡೆಯಲು ಹೋದವರು ಜೈಲು ಸೇರುವಂತಾಗಿದೆ.
Two including activist Johan Sequeira taken to custody for assault on two police constables at Urwa Police Station. Narayana and Pooja have been admitted to Wenlock hospital in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm