ಬ್ರೇಕಿಂಗ್ ನ್ಯೂಸ್
17-07-21 11:26 am Udupi Correspondent ಕ್ರೈಂ
ಉಡುಪಿ, ಜುಲೈ 16: ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಘಟನೆ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಎಸ್ಪಿ ವಿಷ್ಣುವರ್ಧನ್, ಈಗಾಗ್ಲೇ ನಾಲ್ಕು ಪೊಲೀಸ್ ತಂಡಗಳು ಈ ಬಗ್ಗೆ ತನಿಖಾ ಕಾರ್ಯ ನಡೆಸುತ್ತಿದ್ದಾರೆ. ಕೊಲೆಯ ಸುಳಿವು ಸಿಕ್ಕಿದ್ದು ನೈಜ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದೇವೆ. ಒಂದೆರಡು ದಿನದಲ್ಲಿ ಅಪರಾಧಿಗಳ ಪತ್ತೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಬ್ರಹ್ಮಾವರದ ಉಪ್ಪಿನಕೋಟೆಯ ಫ್ಲಾಟ್ ನಲ್ಲಿ ಜುಲೈ 12 ರಂದು ವಿಶಾಲಾ ಗಾಣಿಗ ಕೊಲೆಯಾಗಿದ್ದರು. ಕೊಲೆ ಕೃತ್ಯ ಭಾರೀ ಸಂಚಲನ ಎಬ್ಬಿಸಿದ್ದು ಯಾರು, ಯಾಕಾಗಿ ಕೃತ್ಯ ಎಸಗಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಫ್ಲಾಟ್ ಸುಪರ್ ವೈಸರ್, ಆಟೋ ಚಾಲಕ ಸೇರಿದಂತೆ ಹಲವರನ್ನು ಪೊಲೀಸರು ಅಂದೇ ವಿಚಾರಣೆಗೆ ಒಳಪಡಿಸಿದ್ದರು. ಆದರೆ, ಸೂಕ್ತ ಸುಳಿವು ಲಭಿಸಿರಲಿಲ್ಲ. ಕರೆಯ ಜಾಡು ಹಿಡಿದು ಒಂದು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿದೆ ಎನ್ನಲಾಗುತ್ತಿದ್ದು ಕೊಲೆಗೂ ಬೆಂಗಳೂರಿಗೂ ಲಿಂಕ್ ಇದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
ಇತ್ತೀಚೆಗಷ್ಟೇ ದುಬೈನಿಂದ ಊರಿಗೆ ಬಂದಿದ್ದ ವಿಶಾಲಾ ಗಾಣಿಗ ಕೊಲೆಯ ಬಳಿಕ ಆಕೆಯ ಮೈಯಲ್ಲಿದ್ದ ಆವರಣವನ್ನು ಆಗಂತುಕರು ದೋಚಿದ್ದರು. ಆದರೆ, ಕೃತ್ಯಕ್ಕೂ ಮೊದಲು ಟೀ ಕುಡಿದಿರುವ ಸಾಕ್ಷ್ಯ ಫ್ಲಾಟಿಗೆ ಯಾರೋ ಪರಿಚಿತರೇ ಬಂದಿದ್ದರು ಎನ್ನೋದಕ್ಕೆ ಸುಳಿವು ನೀಡಿತ್ತು. ಹೀಗಾಗಿ ಪರಿಚಿತನೇ ಈ ಕೃತ್ಯ ಎಸಗಿದ್ದಾನೆಯೇ ಎನ್ನುವ ಶಂಕೆ ಪೊಲೀಸರಲ್ಲಿದೆ. ಇವೆಲ್ಲ ಸುಳಿವು ಮತ್ತು ಮೊಬೈಲ್ ಕರೆ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬರ್ಬರ ಕೊಲೆ ; ಬ್ರಹ್ಮಾವರದ ಫ್ಲಾಟ್ ನಲ್ಲಿ ಕೃತ್ಯ, ಹಣ, ಚಿನ್ನಕ್ಕಾಗಿ ಹತ್ಯೆ ಶಂಕೆ
Continuing the probe in the sensational murder case of Vishala Ganiga which took place in a private apartment in Uppinakote, Brahmavar on Monday the police have integrated almost ten persons. A special police team has also gone to Bangalore suspecting some involvement of some persons.
28-03-24 11:00 pm
HK News Desk
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
Yathindra Siddaramaiah, Amit Shah Gunda, rowd...
28-03-24 09:36 pm
Bangalore NIA arrest, Cafe blast, terror: ರಾಮ...
28-03-24 08:44 pm
Davangere Congress, Shamanur family, Vinay ku...
28-03-24 04:14 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
28-03-24 10:56 pm
Mangalore Correspondent
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
28-03-24 10:30 pm
Mangalore Correspondent
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm