ಬ್ರೇಕಿಂಗ್ ನ್ಯೂಸ್
17-07-21 11:54 am Mangaluru Correspondent ಕ್ರೈಂ
ಉಳ್ಳಾಲ, ಜು.17: ಫ್ಲ್ಯಾಟ್ ಒಳಗಡೆ ನುಗ್ಗಿದ ಆರೋಪಿಯೋರ್ವ 24 ಗ್ರಾಂ ತೂಕದ ಚಿನ್ನದ ನಕ್ಲೇಸ್ ಮತ್ತು ಮನೆಯೊಳಗಿದ್ದ ಸಿಸಿಟಿವಿಯನ್ನು ಕಳವು ನಡೆಸಿದ್ದು, ಅಲ್ಲದೆ ಆರೋಪಿ ಸಹಿತ ಆತನ ಸಹೋದರ ಈ ಹಿಂದೆಯೂ 160 ಗ್ರಾಂ ಚಿನ್ನ ಇದೇ ಮನೆಯಿಂದ ಕಳವುಗೈದಿರುವ ಕುರಿತು ಮಹಿಳೆಯೋರ್ವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕುತ್ತಾರು ಜಂಕ್ಷನ್ ನಲ್ಲಿರುವ ಸಿಲಿಕಾನಿಯಾ ಅಪಾರ್ಟ್ಮೆಂಟಿನ ಡೋರ್ ನಂ. 1207 ನಲ್ಲಿರುವ ಖತೀಜಾ ಮೆಹಸರ್ ಎಂಬವರ ಫ್ಲ್ಯಾಟ್ನಲ್ಲಿ ಕಳವು ನಡೆದಿದೆ. ಮದನಿ ನಗರ ನಿವಾಸಿ ಅಬ್ದುಲ್ ಮುನೀರ್ ಮತ್ತು ಆತನ ಸಹೋದರ ಮೊಹಮ್ಮದ್ ಸಿರಾಜ್ ಎಂಬಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಅಬ್ದುಲ್ ಮುನೀರ್ ನನ್ನು ತಡರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜು.2 ರಂದು ಅಬ್ದುಲ್ ಮುನೀರ್ ಫ್ಲ್ಯಾಟ್ ನಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಮನೆಯೊಳಗೆ ನುಗ್ಗಿ 24 ಗ್ರಾಂ ತೂಕದ ಚಿನ್ನದ ನಕ್ಲೇಸ್ ಮತ್ತು ಸಿಸಿಟಿವಿ ಕಳವು ನಡೆಸಿದ್ದಾನೆ. ಈತ ಫ್ಲ್ಯಾಟ್ ಒಳಗೆ ಹೋಗಿರುವ ಕುರಿತು ಫ್ಲ್ಯಾಟ್ ಹೊರಗಡೆ ಇರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈತ ಒಂದು ವರ್ಷದ ಹಿಂದೆ ಸಹೋದರ ಮೊಹಮ್ಮದ್ ಸಿರಾಜ್ ಜೊತೆ ಸೇರಿಕೊಂಡು ಇದೇ ಮನೆಯಿಂದ 160 ಗ್ರಾಂ ಚಿನ್ನವನ್ನು ಕಳವು ನಡೆಸಿದ್ದಾರೆಂದು ಆರೋಪಿಸಲಾಗಿದೆ. ಸಹೋದರರಿಬ್ಬರು ಕಳವು ನಡೆಸಿದ ಸೊತ್ತುಗಳನ್ನು ಮಾರಾಟ ಮಾಡಿ ಬೆಲೆಬಾಳುವ ಎರಡು ಕಾರುಗಳನ್ನು ಹೊಂದಿ ಅದರಲ್ಲಿ ಸುತ್ತಾಡುತ್ತಿರುವ ಮಾಹಿತಿಯನ್ನು ನೀಡಿದ್ದಾರೆ.
ಮಹಿಳೆಯ ಸ್ನಾನ ಶೂಟ್ ಮಾಡಿ ಸಿಕ್ಕಿಬಿದ್ದಿದ್ದ !
ಆರೋಪಿ ಅಬ್ದುಲ್ ಮುನೀರ್ ಈ ಹಿಂದೆ ಜ.20 ರಂದು ಅಸೌಖ್ಯ ನಿಮಿತ್ತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರೋರ್ವರನ್ನು ನೋಡುವ ನೆಪದಲ್ಲಿ ಆಸ್ಪತ್ರೆಗೆ ತೆರಳಿ, ಅಲ್ಲೇ ಇದ್ದ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಮೊಬೈಲಿನಲ್ಲಿ ಚಿತ್ರೀಕರಿಸಿದ್ದ. ಆ ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರಿಂದಲೇ ಬಂಧಿತನಾಗಿದ್ದ. ಪ್ರಕರಣಕ್ಕೆ ಸಂಬಂಧಿಸಿ ಕೆಲವು ತಿಂಗಳ ಹಿಂದಷ್ಟೇ ಬಿಡುಗಡೆಗೊಂಡಾತ ಮತ್ತೆ ಕಳವು ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾನೆ.
ಆಸ್ಪತ್ರೆ ವಾರ್ಡ್ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ; ಆರೋಪಿ ಬಂಧನ
A woman has filed a complaint with Ullal police alleging theft of a 24-gm gold necklace and a CCTV camera from her apartment residence. In her complaint, she alleged that the accused had stolen 160-gm gold from her residence a year ago. The theft was reported in the residence of Kathija Mahesar in the Silicon Apartment of the city.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm