ಬ್ರೇಕಿಂಗ್ ನ್ಯೂಸ್
17-07-21 10:13 pm Headline Karnataka News Network ಕ್ರೈಂ
ಬೆಂಗಳೂರು, ಜು. 17: ಸುಮಾರು ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಇಬ್ಬರ ಬಂಧನ ಇಬ್ಬರು ಆರೋಪಿಗಳನ್ನು ಸುದ್ದುಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಇರ್ಫಾನ್ ಮತ್ತು ಥಾರಿಂ ಬಂಧಿತ ಆರೋಪಿಗಳು. ಇವರಿಂದ ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಈ ಮಾದಕ ವಸ್ತುವನ್ನು ಬೆಂಗಳೂರಿಗೆ ರವಾನಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಐಶರಾಮಿ ಜೀವನ ಸಾಗಿಸುತ್ತಿದ್ದರು. ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಕೋಣನಕುಂಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ಸೇಮಂತ, ಸಿದಾರಿ ಬೊಂಜಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಬಂಧಿತ ಆರೋಪಿಗಳು. ನಾಲ್ವರಿಂದ ಒಟ್ಟು 134 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸೇಮಂತ ಎಂಬಾತ ಕಾರಿನಲ್ಲಿ 41 ಕೆ.ಜಿ. ಗಾಂಜಾ ಮಾರಾಟ ಮಾಡಲು ಯತ್ನಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನಿಂದ 41 ಕೆ.ಜಿ. ಗಾಂಜಾ ಸಿಕ್ಕಿದ್ದು, ಈತ ನೀಡಿದ ಮಾಹಿತಿಮೇರೆಗೆ ಇತರೆ ಮೂವರು ಆರೋಪಿಗಳನ್ನು ಲಾಡ್ಜ್ ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 93 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರು ಮಾದಕ ವ್ಯಸನಿಗಳ ತವರೂರಾರಿ ಪರಿವರ್ತನೆಯಾಗುತ್ತಿದೆ. ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ 2 ಸಾವಿರ ಕೆ.ಜಿ. ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನೇ ಪತ್ತೆ ಮಾಡಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಾದಕ ವಸ್ತು ಪರಕರಣಗಳೇ ದಾಖಲಾಗುತ್ತಿವೆ. ಬಹುತೇಕ ಪ್ರಕರಣಗಳ ಗಾಂಜಾ ಮೂಲ ಆಂಧ್ರ ಪ್ರದೇಶ ಎಂಬುದು ದೃಢಪಟ್ಟಿದೆ. ಪೊಲೀಸರು ಸತತ ಪ್ರಕರಣ ದಾಖಲಿಸುತ್ತಿರುವ ನಡುವೆಯೂ ಗಾಂಜಾ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
The Central Crime Branch (CCB) of Bangalore have arrested two drug peddlers in Bengaluru and seized 1.3 litres of hashish oil and two kilograms of ganja worth Rs 12 lakh.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm