ಬ್ರೇಕಿಂಗ್ ನ್ಯೂಸ್
17-07-21 10:13 pm Headline Karnataka News Network ಕ್ರೈಂ
ಬೆಂಗಳೂರು, ಜು. 17: ಸುಮಾರು ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಇಬ್ಬರ ಬಂಧನ ಇಬ್ಬರು ಆರೋಪಿಗಳನ್ನು ಸುದ್ದುಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಇರ್ಫಾನ್ ಮತ್ತು ಥಾರಿಂ ಬಂಧಿತ ಆರೋಪಿಗಳು. ಇವರಿಂದ ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಈ ಮಾದಕ ವಸ್ತುವನ್ನು ಬೆಂಗಳೂರಿಗೆ ರವಾನಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಐಶರಾಮಿ ಜೀವನ ಸಾಗಿಸುತ್ತಿದ್ದರು. ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಕೋಣನಕುಂಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ಸೇಮಂತ, ಸಿದಾರಿ ಬೊಂಜಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಬಂಧಿತ ಆರೋಪಿಗಳು. ನಾಲ್ವರಿಂದ ಒಟ್ಟು 134 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸೇಮಂತ ಎಂಬಾತ ಕಾರಿನಲ್ಲಿ 41 ಕೆ.ಜಿ. ಗಾಂಜಾ ಮಾರಾಟ ಮಾಡಲು ಯತ್ನಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನಿಂದ 41 ಕೆ.ಜಿ. ಗಾಂಜಾ ಸಿಕ್ಕಿದ್ದು, ಈತ ನೀಡಿದ ಮಾಹಿತಿಮೇರೆಗೆ ಇತರೆ ಮೂವರು ಆರೋಪಿಗಳನ್ನು ಲಾಡ್ಜ್ ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 93 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರು ಮಾದಕ ವ್ಯಸನಿಗಳ ತವರೂರಾರಿ ಪರಿವರ್ತನೆಯಾಗುತ್ತಿದೆ. ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ 2 ಸಾವಿರ ಕೆ.ಜಿ. ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನೇ ಪತ್ತೆ ಮಾಡಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಾದಕ ವಸ್ತು ಪರಕರಣಗಳೇ ದಾಖಲಾಗುತ್ತಿವೆ. ಬಹುತೇಕ ಪ್ರಕರಣಗಳ ಗಾಂಜಾ ಮೂಲ ಆಂಧ್ರ ಪ್ರದೇಶ ಎಂಬುದು ದೃಢಪಟ್ಟಿದೆ. ಪೊಲೀಸರು ಸತತ ಪ್ರಕರಣ ದಾಖಲಿಸುತ್ತಿರುವ ನಡುವೆಯೂ ಗಾಂಜಾ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
The Central Crime Branch (CCB) of Bangalore have arrested two drug peddlers in Bengaluru and seized 1.3 litres of hashish oil and two kilograms of ganja worth Rs 12 lakh.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm