ಬ್ರೇಕಿಂಗ್ ನ್ಯೂಸ್
20-07-21 06:01 pm Headline Karnataka News Network ಕ್ರೈಂ
ಮುಂಬೈ; ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿರುವ ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅವರನ್ನು ಇಂದು ಮಂಗಳವಾರ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜುಲೈ 23ರ ವರೆಗೂ ರಾಜ್ ಕುಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ನಿನ್ನೆ (ಜುಲೈ 19) ರಾತ್ರಿ ರಾಜ್ ಕುಂದ್ರ ಅವರನ್ನು ಬಂಧಿಸಿದ ಬಳಿಕ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರೇಲ್ ಈ ಬಗ್ಗೆ ಖಚಿತ ಪಡಿಸಿದ್ದರು. ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ'' ಎಂದಿದ್ದರು.
'ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್ಗಳನ್ನು ಬಳಸಿ ಮೊಬೈಲ್ ಆಪ್ಗಳಿಗೆ ಅಪ್ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ'' ಎಂದಿದ್ದರು.
ರಾಜ್ ಕುಂದ್ರಾ ಬಂಧನ ಆಗುತ್ತಿದ್ದಂತೆ, ಕುಂದ್ರಾ, ಪೋರ್ನ್ (ನೀಲಿ ಚಿತ್ರ) ಬಗ್ಗೆ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಪೋರ್ನ್ ವಿಡಿಯೋಗಳ ಬಗ್ಗೆ 2012ರಲ್ಲಿ ರಾಜ್ ಕುಂದ್ರಾ ಟ್ವೀಟ್ ಮಾಡಿದ್ದರು, ''ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ'' ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಟ್ವೀಟ್ ಈಗ ವೈರಲ್ ಆಗುತ್ತಿವೆ.
Raj Kundra sent to police custody till July 23 alleged chats become key evidence in case
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm