ಬ್ರೇಕಿಂಗ್ ನ್ಯೂಸ್
23-07-21 01:03 pm Headline Karnataka News Network ಕ್ರೈಂ
ಕಾಸರಗೋಡು, ಜು.23: ಮನೆಯಲ್ಲಿ ಅಸೌಖ್ಯದಿಂದ ಮಲಗಿದ್ದ ಗಂಡನನ್ನು ಪತ್ನಿಯೇ ಕೊಲೆಗೈದ ಘಟನೆ ಚಂದೇರದ ಪಿಲಿಕ್ಕೋಡು ಮಡಿವಯಲ್ ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ.
ಮಡಿವಯಲ್ ನ ಕುಂಞಂಬು(66) ಕೊಲೆಗೀಡಾದವರು. ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದವರ ಪತ್ನಿ ಜಾನಕಿ, ಸಂಬಂಧಿಕರಾದ ವಿ.ರಾಜೇಶ್ ಹಾಗೂ ಅನಿಲ್ ಎಂಬಾತನನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಕುಂಞಂಬು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದ್ದರು. ಇವರನ್ನು ನೋಡಿಕೊಳ್ಳಲು ಕಷ್ಟವಾಗುತ್ತೆ ಅಂತ ಬುಧವಾರ ತಡರಾತ್ರಿ ಕೊಲೆ ನಡೆಸಿರುವುದಾಗಿ ಬಂಧಿತರು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಬುಧವಾರ ರಾತ್ರಿ ಸ್ಥಳೀಯ ಆ್ಯಂಬುಲೆನ್ಸ್ ಚಾಲಕರೊಬ್ಬರಿಗೆ ಅನಾಮಧೇಯ ಕರೆ ಬಂದಿತ್ತು. ಮಡಿವಯಲ್ ನಲ್ಲಿ ವ್ಯಕ್ತಿಯೋರ್ವರು ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ತಲಪಿಸುವಂತೆ ತಿಳಿಸಿದ್ದ. ಬಳಿಕ ಆ್ಯಂಬುಲೆನ್ಸ್ ಚಾಲಕ ಅದೇ ನಂಬರ್ ಗೆ ಮರಳಿ ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡು ಪರಿಸರದ ನಿವಾಸಿಗಳಿಗೆ ಮಾಹಿತಿ ನೀಡಿದ್ದ. ಸ್ಥಳೀಯರು ವಿಚಾರಿಸಿದಾಗ ಕುಂಞಂಬು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಆದರೆ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಹಾಗೂ ನೆಲದಲ್ಲಿ ರಕ್ತದ ಕಲೆಗಳು ಕಂಡುಬಂದಿತ್ತು. ಈ ಬಗ್ಗೆ ಮೃತರ ಪತ್ನಿ ಜಾನಕಿಯನ್ನು ಪ್ರಶ್ನಿಸಿದಾಗ ಮಂಚದಿಂದ ಬಿದ್ದು ಗಾಯಗೊಂಡಿರುವುದಾಗಿ ತಿಳಿಸಿದ್ದಳು. ಸ್ಥಳೀಯರು ಚಂದೇರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಕುಂಞಂಬು ಮನೆಗೆ ಬುಧವಾರ ರಾತ್ರಿ ಇಬ್ಬರು ಆಗಮಿಸಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಜಾನಕಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
Wife and three others kill husband infected with Covid 19 disease in Kasaragod. The incident happened at Pilikkod Madivayal within Chandera police station limits. Kunhambu (66) from Madivayal was murdered in this case. His wife Janaki, and relatives V Rajesh and Anil, have been arrested. The police, who took the trio into custody, subjected them to intense questioning before arresting them on Thursday night.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm