ಬ್ರೇಕಿಂಗ್ ನ್ಯೂಸ್
23-07-21 01:03 pm Headline Karnataka News Network ಕ್ರೈಂ
ಕಾಸರಗೋಡು, ಜು.23: ಮನೆಯಲ್ಲಿ ಅಸೌಖ್ಯದಿಂದ ಮಲಗಿದ್ದ ಗಂಡನನ್ನು ಪತ್ನಿಯೇ ಕೊಲೆಗೈದ ಘಟನೆ ಚಂದೇರದ ಪಿಲಿಕ್ಕೋಡು ಮಡಿವಯಲ್ ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ.
ಮಡಿವಯಲ್ ನ ಕುಂಞಂಬು(66) ಕೊಲೆಗೀಡಾದವರು. ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದವರ ಪತ್ನಿ ಜಾನಕಿ, ಸಂಬಂಧಿಕರಾದ ವಿ.ರಾಜೇಶ್ ಹಾಗೂ ಅನಿಲ್ ಎಂಬಾತನನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಕುಂಞಂಬು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದ್ದರು. ಇವರನ್ನು ನೋಡಿಕೊಳ್ಳಲು ಕಷ್ಟವಾಗುತ್ತೆ ಅಂತ ಬುಧವಾರ ತಡರಾತ್ರಿ ಕೊಲೆ ನಡೆಸಿರುವುದಾಗಿ ಬಂಧಿತರು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.
ಬುಧವಾರ ರಾತ್ರಿ ಸ್ಥಳೀಯ ಆ್ಯಂಬುಲೆನ್ಸ್ ಚಾಲಕರೊಬ್ಬರಿಗೆ ಅನಾಮಧೇಯ ಕರೆ ಬಂದಿತ್ತು. ಮಡಿವಯಲ್ ನಲ್ಲಿ ವ್ಯಕ್ತಿಯೋರ್ವರು ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ತಲಪಿಸುವಂತೆ ತಿಳಿಸಿದ್ದ. ಬಳಿಕ ಆ್ಯಂಬುಲೆನ್ಸ್ ಚಾಲಕ ಅದೇ ನಂಬರ್ ಗೆ ಮರಳಿ ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡು ಪರಿಸರದ ನಿವಾಸಿಗಳಿಗೆ ಮಾಹಿತಿ ನೀಡಿದ್ದ. ಸ್ಥಳೀಯರು ವಿಚಾರಿಸಿದಾಗ ಕುಂಞಂಬು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಆದರೆ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಹಾಗೂ ನೆಲದಲ್ಲಿ ರಕ್ತದ ಕಲೆಗಳು ಕಂಡುಬಂದಿತ್ತು. ಈ ಬಗ್ಗೆ ಮೃತರ ಪತ್ನಿ ಜಾನಕಿಯನ್ನು ಪ್ರಶ್ನಿಸಿದಾಗ ಮಂಚದಿಂದ ಬಿದ್ದು ಗಾಯಗೊಂಡಿರುವುದಾಗಿ ತಿಳಿಸಿದ್ದಳು. ಸ್ಥಳೀಯರು ಚಂದೇರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಕುಂಞಂಬು ಮನೆಗೆ ಬುಧವಾರ ರಾತ್ರಿ ಇಬ್ಬರು ಆಗಮಿಸಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಜಾನಕಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
Wife and three others kill husband infected with Covid 19 disease in Kasaragod. The incident happened at Pilikkod Madivayal within Chandera police station limits. Kunhambu (66) from Madivayal was murdered in this case. His wife Janaki, and relatives V Rajesh and Anil, have been arrested. The police, who took the trio into custody, subjected them to intense questioning before arresting them on Thursday night.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am