ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm