ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm