ಬ್ರೇಕಿಂಗ್ ನ್ಯೂಸ್
23-07-21 06:03 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ತಾಯಿಗೆ ಮಕ್ಕಳು ಹೆಗ್ಗಣ ಆಗಿದ್ದರೂ ಚಿನ್ನವಂತೆ. ಆದರೆ, ಮಕ್ಕಳಿಗೆ ಹಾಗೇನೂ ಇಲ್ವಲ್ಲ. ಇಲ್ಲೊಬ್ಬ 18 ವರ್ಷದ ಹುಡುಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಕುತ್ತಿಗೆ ಅಮುಕಿ ಕೊಲೆ ಮಾಡಿದ್ದಾನೆ. ಹೌದು.. ಮುಂಬೈನ ವಸಾಯಿ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಲಿವಾಡದಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂದು ವರ್ಷದ ಹಿಂದೆ ಗಂಡ ತೀರಿಕೊಂಡ ಬಳಿಕ 59 ವರ್ಷದ ಮಹಿಳೆ ಕುಡಿಯಲು ತೊಡಗಿದ್ದರು. ಮನೆಯಲ್ಲಿ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರ ಇಬ್ಬರು ಮಕ್ಕಳು ಮತ್ತು ತಾಯಿ ನಡುವೆ ಕಂದಕ ತಂದಿಟ್ಟಿತ್ತು. ಮೊನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ತಾಯಿ, ಮಕ್ಕಳ ನಡುವೆ ಜಗಳ ಆಗಿತ್ತು.

ಎಂಟನೇ ಕ್ಲಾಸ್ ಓದುತ್ತಿದ್ದ 18 ವರ್ಷದ ಹುಡುಗ, ತನ್ನ ತಂಗಿಯನ್ನು ಮನೆಯಿಂದ ಹೊರಗೆ ಹೋಗುವಂತೆ ಹೇಳಿದ್ದಾನೆ. ಆಕೆ ಹೊರ ನಡೆಯುತ್ತಿದ್ದಂತೆ, ಮನೆಯ ಬಾಗಿಲನ್ನು ಒಳಗಿಂದ ಲಾಕ್ ಮಾಡಿದ್ದ ಹುಡುಗ ತಾಯಿಯ ಕುತ್ತಿಗೆ ಬೆಲ್ಟ್ ನಲ್ಲಿ ಅದುಮಿದ್ದಾನೆ. ವಿಲವಿಲ ಒದ್ದಾಡಿ ಸಾಯುವ ತನಕವೂ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಸ್ವಲ್ಪ ಹೊತ್ತಿನ ಬಳಿಕ ತಂಗಿ ಮನೆಗೆ ಮರಳಿದ್ದು, ಅಲ್ಲಿನ ದೃಶ್ಯ ನೋಡಿ ಹೌಹಾರಿದ್ದಾಳೆ. ತಾಯಿಯನ್ನೇ ಕೊಲೆ ಮಾಡಿದ್ದು ನೋಡಿ ಸ್ಥಳೀಯರನ್ನು ಕರೆದಿದ್ದಾಳೆ. ಬಳಿಕ ವಸಾಯಿ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ತಾಯಿಯನ್ನು ಕೊಲೆಗೈದ ಬಳಿಕ ಅಲ್ಲಿಯೇ ಕುಳಿತಿದ್ದ ಮಗನನ್ನು ವಶಕ್ಕೆ ಪಡೆದಿದ್ದಾರೆ. ತಂದೆಯ ಉಳಿಸಿದ್ದ ಹಣವನ್ನು ತಾಯಿ ಕುಡಿತಕ್ಕೇ ಮುಗಿಸುತ್ತಿದ್ದಾಳೆಂದು ಕೊಲೆ ಮಾಡಿದ್ದಾಗಿ ಹುಡುಗ ಹೇಳಿದ್ದಾನಂತೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm