ಬ್ರೇಕಿಂಗ್ ನ್ಯೂಸ್
24-07-21 12:55 pm Mangalore Correspondent ಕ್ರೈಂ
ಮಂಗಳೂರು, ಜುಲೈ 24: ತನ್ನನ್ನು ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಸಂಪರ್ಕಿಸಿ, ಮನೆ ಮಾಲೀಕನಿಂದಲೇ ಲಕ್ಷಾಂತರ ರೂ. ಎಗರಿಸಿದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಕುಳಾಯಿಯಲ್ಲಿ ಫ್ಲ್ಯಾಟ್ ಹೊಂದಿರುವ ವ್ಯಕ್ತಿಯೊಬ್ಬರು ಮ್ಯಾಜಿಕ್ ಬ್ರಿಕ್ ಎನ್ನುವ ವೆಬ್ಸೈಟ್ನಲ್ಲಿ ಫ್ಲಾಟ್ ಬಾಡಿಗೆ ನೀಡುವುದಾಗಿ ಜಾಹಿರಾತು ಹಾಕಿದ್ದರು. ಇದನ್ನು ನೋಡಿದ ಅಂಕಿತ್ ವಿಜಯ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಜು.20 ರಂದು ಕರೆ ಮಾಡಿದ್ದು ಸೈನಿಕ ವೃತ್ತಿಯಲ್ಲಿದ್ದು ಪ್ರಸ್ತುತ ಅಹಮದಾಬಾದ್ನಲ್ಲಿ ಕರ್ತವ್ಯದಲ್ಲಿದ್ದೇನೆ. ಈಗ ಮಂಗಳೂರಿಗೆ ವರ್ಗಾವಣೆಯಾಗಿದ್ದೇನೆ. ತನಗೆ ಕುಳಾಯಿಯಲ್ಲಿರುವ ಫ್ಲಾಟ್ ಬಾಡಿಗೆಗೆ ಬೇಕೆಂದು ತಿಳಿಸಿ ಮಿಲಿಟರಿ ಸಮವಸ್ತ್ರದಲ್ಲಿರುವ ತನ್ನ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಅನ್ನು ವಾಟ್ಸಪ್ ಮಾಡಿದ್ದ. ಬಳಿಕ ಮನೆಯ ಫೋಟೊಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾನೆ.

ಅದರಂತೆ ಫ್ಲಾಟ್ನ ಭಾವಚಿತ್ರವನ್ನು ಕಳುಹಿಸಿದ್ದು, ಜು.20ರಂದು ಆರೋಪಿ ಕರೆಮಾಡಿ ಮನೆಯವರಿಗೆ ಫ್ಲ್ಯಾಟ್ ಇಷ್ಟವಾಗಿದ್ದು ಫ್ಲಾಟ್ ಬಾಡಿಗೆಗೆ ನೀಡುವಂತೆ ತಿಳಿಸಿದ್ದಾನೆ. ತಿಂಗಳಿಗೆ 10 ಸಾವಿರ ರೂ. ಬಾಡಿಗೆ ಹಾಗೂ 25 ಸಾವಿರ ರೂ. ಡೆಪಾಸಿಡ್ ಬಗ್ಗೆ ತಿಳಿಸಿದ್ದರು. ಆರೋಪಿ ವ್ಯಕ್ತಿ ಮುಂಗಡ ಹಣವನ್ನು ಮೇಲಾಧಿಕಾರಿಯ ಮೂಲಕ ಪಾವತಿಸುವುದಾಗಿ ತಿಳಿಸಿ ಅಕೌಂಟ್ ಮಾಹಿತಿ ಪಡೆದಿದ್ದ.
ಬಳಿಕ ಆರೋಪಿ ಕಡೆಯಿಂದ ಫ್ಲ್ಯಾಟ್ ಮಾಲೀಕರಿಗೆ 50 ರೂ. ಎಚ್ಡಿಎಫ್ಸಿ ಬ್ಯಾಂಕ್ ಖಾತೆಯಿಂದ ಬಂದಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಮನೆ ಮಾಲೀಕರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,23,500 ರೂ. ಖಾಲಿಯಾಗಿದೆ. ಈ ಹಣವನ್ನು ಆರೋಪಿಯೇ ಆತನ ಖಾತೆಗೆ ವರ್ಗಾಯಿಸಿದ್ದಾನೆ ಎಂದು ಮನೆ ಮಾಲೀಕ ವ್ಯಕ್ತಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Flat house owner cheated in the name of Indian Army soldier lakhs of the amount lost case filed. A case has been registered at the cybercrime police station in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm