ಬ್ರೇಕಿಂಗ್ ನ್ಯೂಸ್
24-07-21 12:55 pm Mangalore Correspondent ಕ್ರೈಂ
ಮಂಗಳೂರು, ಜುಲೈ 24: ತನ್ನನ್ನು ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಸಂಪರ್ಕಿಸಿ, ಮನೆ ಮಾಲೀಕನಿಂದಲೇ ಲಕ್ಷಾಂತರ ರೂ. ಎಗರಿಸಿದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಕುಳಾಯಿಯಲ್ಲಿ ಫ್ಲ್ಯಾಟ್ ಹೊಂದಿರುವ ವ್ಯಕ್ತಿಯೊಬ್ಬರು ಮ್ಯಾಜಿಕ್ ಬ್ರಿಕ್ ಎನ್ನುವ ವೆಬ್ಸೈಟ್ನಲ್ಲಿ ಫ್ಲಾಟ್ ಬಾಡಿಗೆ ನೀಡುವುದಾಗಿ ಜಾಹಿರಾತು ಹಾಕಿದ್ದರು. ಇದನ್ನು ನೋಡಿದ ಅಂಕಿತ್ ವಿಜಯ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಜು.20 ರಂದು ಕರೆ ಮಾಡಿದ್ದು ಸೈನಿಕ ವೃತ್ತಿಯಲ್ಲಿದ್ದು ಪ್ರಸ್ತುತ ಅಹಮದಾಬಾದ್ನಲ್ಲಿ ಕರ್ತವ್ಯದಲ್ಲಿದ್ದೇನೆ. ಈಗ ಮಂಗಳೂರಿಗೆ ವರ್ಗಾವಣೆಯಾಗಿದ್ದೇನೆ. ತನಗೆ ಕುಳಾಯಿಯಲ್ಲಿರುವ ಫ್ಲಾಟ್ ಬಾಡಿಗೆಗೆ ಬೇಕೆಂದು ತಿಳಿಸಿ ಮಿಲಿಟರಿ ಸಮವಸ್ತ್ರದಲ್ಲಿರುವ ತನ್ನ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಅನ್ನು ವಾಟ್ಸಪ್ ಮಾಡಿದ್ದ. ಬಳಿಕ ಮನೆಯ ಫೋಟೊಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾನೆ.

ಅದರಂತೆ ಫ್ಲಾಟ್ನ ಭಾವಚಿತ್ರವನ್ನು ಕಳುಹಿಸಿದ್ದು, ಜು.20ರಂದು ಆರೋಪಿ ಕರೆಮಾಡಿ ಮನೆಯವರಿಗೆ ಫ್ಲ್ಯಾಟ್ ಇಷ್ಟವಾಗಿದ್ದು ಫ್ಲಾಟ್ ಬಾಡಿಗೆಗೆ ನೀಡುವಂತೆ ತಿಳಿಸಿದ್ದಾನೆ. ತಿಂಗಳಿಗೆ 10 ಸಾವಿರ ರೂ. ಬಾಡಿಗೆ ಹಾಗೂ 25 ಸಾವಿರ ರೂ. ಡೆಪಾಸಿಡ್ ಬಗ್ಗೆ ತಿಳಿಸಿದ್ದರು. ಆರೋಪಿ ವ್ಯಕ್ತಿ ಮುಂಗಡ ಹಣವನ್ನು ಮೇಲಾಧಿಕಾರಿಯ ಮೂಲಕ ಪಾವತಿಸುವುದಾಗಿ ತಿಳಿಸಿ ಅಕೌಂಟ್ ಮಾಹಿತಿ ಪಡೆದಿದ್ದ.
ಬಳಿಕ ಆರೋಪಿ ಕಡೆಯಿಂದ ಫ್ಲ್ಯಾಟ್ ಮಾಲೀಕರಿಗೆ 50 ರೂ. ಎಚ್ಡಿಎಫ್ಸಿ ಬ್ಯಾಂಕ್ ಖಾತೆಯಿಂದ ಬಂದಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಮನೆ ಮಾಲೀಕರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,23,500 ರೂ. ಖಾಲಿಯಾಗಿದೆ. ಈ ಹಣವನ್ನು ಆರೋಪಿಯೇ ಆತನ ಖಾತೆಗೆ ವರ್ಗಾಯಿಸಿದ್ದಾನೆ ಎಂದು ಮನೆ ಮಾಲೀಕ ವ್ಯಕ್ತಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Flat house owner cheated in the name of Indian Army soldier lakhs of the amount lost case filed. A case has been registered at the cybercrime police station in Mangalore.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm