ಬ್ರೇಕಿಂಗ್ ನ್ಯೂಸ್
29-07-21 12:13 pm Mangaluru Correspondent ಕ್ರೈಂ
Photo credits : Representative Photo
ಮಂಗಳೂರು, ಜುಲೈ 29: ಮಂಗಳೂರಿನಿಂದ ಗುಜರಾತಿಗೆ ಒಯ್ಯುತ್ತಿದ್ದ ಎರಡು ಕೋಟಿ ಮೌಲ್ಯದ ಅಡಿಕೆಯೊಂದಿಗೆ ಚಾಲಕರು ಪರಾರಿಯಾದ ಘಟನೆ ನಡೆದಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 19 ಮತ್ತು 20ರಂದು ಎರಡು ಲಾರಿಗಳಲ್ಲಿ ಅಡಿಕೆಯನ್ನು ಗುಜರಾತಿನ ರಾಜಕೋಟ್ ಗೆ ಸಾಗಿಸಲಾಗಿತ್ತು. ಒಂದು ಲಾರಿಯಲ್ಲಿ 291 ಚೀಲ ಮತ್ತು ಇನ್ನೊಂದು ಲಾರಿಯಲ್ಲಿ 301 ಚೀಲ ಅಡಿಕೆ ಸಂಗ್ರಹ ಇತ್ತು. ಜುಲೈ 24ರಂದು ಅಡಿಕೆ ಹೊಂದಿದ್ದ ಲಾರಿ ಗುಜರಾತ್ ತಲುಪಬೇಕಾಗಿತ್ತು. ಆದರೆ, ಲಾರಿ ಅಲ್ಲಿಗೆ ತಲುಪದೇ ಅದರ ಚಾಲಕರು ಅಡಿಕೆಯೊಂದಿಗೆ ನಾಪತ್ತೆಯಾಗಿದ್ದಾರೆ.
ಲಾರಿ ಚಾಲಕರಾದ ಭವೇಶ್ ಕೆ. ಷಾ, ಆಶಿಷ್ ಯಾದವ್ ಮತ್ತು ಮಹಾರಾಷ್ಟ್ರದ ನಾಸಿಕ್ ನಲ್ಲಿ ಜೋಷಿ ಹೆಸರಲ್ಲಿ ಟ್ರಾನ್ಸ್ ಪೋರ್ಟ್ ಹೊಂದಿರುವ ಅದರ ಮಾಲೀಕ ವಿಜಯ್ ಜೋಷಿ ಈ ಮೂವರ ವಿರುದ್ದ ಕೇಸು ದಾಖಲಾಗಿದೆ. ಮಂಗಳೂರು, ಭಟ್ಕಳ ಸೇರಿದಂತೆ ವಿವಿಧ ಕಡೆ ಕಚೇರಿಯನ್ನು ಹೊಂದಿರುವ ಸೌತ್ ಇಂಡಿಯಾ ಟ್ರಾನ್ಸ್ ಪೋರ್ಟ್ ಕಂಪನಿಯು ಅಡಿಕೆ ಸೇರಿದಂತೆ ವಿವಿಧ ಮಾದರಿಯ ತೋಟಗಾರಿಕೆ ಸಾಮಗ್ರಿಗಳನ್ನು ಖರೀದಿಸಿ, ಬೇರೆ ಬೇರೆ ರಾಜ್ಯಗಳಿಗೆ ರವಾನಿಸುತ್ತದೆ.
ಅದೇ ರೀತಿ ಅಡಿಕೆಯನ್ನು ಖರೀದಿಸಿ, ಗುಜರಾತಿನ ರಾಜಕೋಟ್ ನಲ್ಲಿರುವ ಸೌತ್ ಇಂಡಿಯಾ ಟ್ರಾನ್ಸ್ ಪೋರ್ಟ್ ಕಚೇರಿಗೆ ಕಳುಹಿಸಿಕೊಟ್ಟಿತ್ತು. ಇದಕ್ಕಾಗಿ ಬೋಳೂರಿನ ಜಯಲಕ್ಷ್ಮೀ ಟ್ರಾನ್ಸ್ ಪೋರ್ಟ್ ಬುಕ್ಕಿಂಗ್ ಕಚೇರಿಯಿಂದ ಲಾರಿ ಬಾಡಿಗೆ ಪಡೆಯಲಾಗಿತ್ತು. ಆದರೆ, ಲಾರಿ ನಿಗದಿತ ದಿನಾಂಕ ಜುಲೈ 24ಕ್ಕೆ ಅಲ್ಲಿಗೆ ತಲುಪದೇ ಅಡಿಕೆಯನ್ನು ಬೇರೆಡೆಗೆ ಒಯ್ದು ಕಳವು ಮಾಡಿರುವ ಸಂಶಯ ಬಂದಿದೆ. ಲಾರಿ ಚಾಲಕರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಇಬ್ಬರೂ ನಾಪತ್ತೆಯಾಗಿದ್ದಾರೆ.
Truck carrying Areca nuts worth Rs two crore from Mangalore to Gujarat goes missing. Four persons have made good their escape with areca nuts worth about two crore rupees. The stock of areca nuts had been sent by two trucks to Rajkot in Gujarat. Lorry driver, driver Bhavesh K Shah, Ashish Yadav, and Vijay Joshi, owner of Joshi Transport, Nasik, Maharashtra, have been named as the accused.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm