ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm