ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm