ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.
ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am