ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm