ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm