ಬ್ರೇಕಿಂಗ್ ನ್ಯೂಸ್
04-09-20 07:01 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಕೊನೆಗೂ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಈಗ ಅಧಿಕೃತವಾಗಿ ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಸಿಸಿಬಿ ಆಯುಕ್ತ ಸಂದೀಪ್ ಪಾಟೀಲ್ ಚಿತ್ರನಟಿಯ ಬಂಧನವನ್ನು ಖಚಿತಪಡಿಸಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ಇಂದು ಬೆಳಗ್ಗೆ ಯಲಹಂಕದ ರಾಗಿಣಿ ಮನೆಗೆ ರೈಡ್ ಮಾಡಿದ್ದ ಪೊಲೀಸರಿಗೆ ಅಲ್ಲಿ ಗಾಂಜಾ ಸ್ಟಾಕ್ ಸಿಕ್ಕಿತ್ತು ಎನ್ನಲಾಗ್ತಿದೆ. ಇವೆಲ್ಲ ಕಾರಣದಿಂದ ಬಂಧಿಸಿರುವ ಪೊಲೀಸರು, ಇನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತಷ್ಟು ದಿನಗಳ ಕಾಲ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am