ಬ್ರೇಕಿಂಗ್ ನ್ಯೂಸ್
02-08-21 10:06 pm Mysore Correspondent ಕ್ರೈಂ
ಮೈಸೂರು, ಆಗಸ್ಟ್ 2: ಇಂಟರ್ ನ್ಯಾಷನಲ್ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸುವ ಜಾಲವನ್ನು ಮೈಸೂರಿನಲ್ಲಿ ಪತ್ತೆ ಮಾಡಲಾಗಿದೆ. ಇಂಟರ್ನೆಟ್ ಬಳಸಿ ಇಂಟರ್ ನ್ಯಾಷನಲ್ ಕರೆಗಳನ್ನು ಲೋಕಲ್ ಕರೆಗಳಾಗಿ ಪರಿವರ್ತಿಸಿ ಗ್ರಾಹಕರಿಗೆ ನೀಡುವ ಮೂಲಕ ಭಾರೀ ಟೆಲಿಕಾಂ ಕಂಪನಿಗೆ ಭಾರೀ ದೋಖಾ ಎಸಗಲಾಗಿತ್ತು. ಪ್ರಕರಣ ಸಂಬಂಧಿಸಿ ಇಬ್ಬರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅಶ್ರಫ್ ಹಾಗೂ ಶೆಮೀಮ್ ಬಂಧಿತರು.
ಬಂಧಿತರಿಂದ 500ಕ್ಕೂ ಅಧಿಕ ಸಿಮ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಸಿಮ್ ಬಾಕ್ಸ್ ಹಾಗೂ ರೂಟರ್ ಬಳಸಿಕೊಂಡು ಕರೆಗಳನ್ನು ಪರಿವರ್ತಿಸುತ್ತಿದ್ದರು ಎಂದು ಪತ್ತೆ ಮಾಡಲಾಗಿದೆ.

ದಂಧೆಯಿಂದ ಸರ್ಕಾರಕ್ಕೆ ಹಾಗೂ ಟೆಲಿಕಾಂ ಕಂಪನಿಗಳಿಗೆ ಕೋಟ್ಯಾಂತರ ರೂ. ನಷ್ಟ ಆಗಿದೆ. ಕರೆ ಮಾಡಿದವರು ಹಾಗೂ ಸ್ವೀಕರಿಸಿದವರಿಗೂ ತಿಳಿಯದಂತೆ ದಂಧೆ ನಡೆಸುತ್ತಿದ್ದರು ಎನ್ನುವ ಅಂಶ ತನಿಖೆಯಲ್ಲಿ ಬಯಲಾಗಿದೆ. ಅಕ್ರಮ ಜಾಲದಲ್ಲಿ ತೊಡಗಿಕೊಂಡಿದ್ದ ಖದೀಮರನ್ನು ಮೈಸೂರು ಪೊಲೀಸರು ಬಂಧಿಸಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಜಾಲದಲ್ಲಿ ಎಷ್ಟು ಮಂದಿ ಇದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇದೊಂದು ಕ್ರಿಮಿನಲ್ ಅಪರಾಧವಾಗಿದ್ದು ಕೇವಲ ಕರೆ ಮಾತ್ರವಲ್ಲ, ಇದೇ ಜಾಲದಡಿ ಇತರೆ ದುಷ್ಕೃತ್ಯಗಳಿಗೂ ಬಳಸಿರುವ ಸಾಧ್ಯತೆ ಇದೆ. ಈ ರೀತಿಯ ದಂಧೆಯಿಂದ ಟೆಲಿಕಾಂ ಕಂಪನಿಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಆರೋಪಿಗಳಿಗೆ ದೊಡ್ಡ ಮೊತ್ತದಲ್ಲಿ ಸಿಮ್ಗಳು ಸಿಕ್ಕ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಹೇಳಿದ್ದಾರೆ.
Two people have been arrested by Mysore police for converting international calls into local calls. Ashraf and Shemim from Kerala are the accused and more than 500 SIMs have been seized by the detainees. Detainees were converting international calls into local calls through calls via a SIM box, router. The government and telecom companies have suffered billions in damages from the accused. In addition, these accused have been treated as headaches for various countries by their actions. The police said. The accused will be further investigated, Mysore Police Commissioner Dr Chandragupta said at a news conference.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm