ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm