ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm