ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm