ಬ್ರೇಕಿಂಗ್ ನ್ಯೂಸ್
09-08-21 12:42 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 9: ಪಾರ್ಕ್ ಮಾಡಿಟ್ಟ ಕಾರಿನ ಗ್ಲಾಸ್ ಒಡೆದು ಅದರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವ ಕೃತ್ಯಗಳು ಕರಾವಳಿಯಲ್ಲಿ ಹೆಚ್ಚುತ್ತಿದ್ದು ಇದರ ಹಿಂದೆ ಉತ್ತರ ಪ್ರದೇಶ ಮೂಲದ ದರೋಡೆಕೋರರು ಇರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಉರ್ವಾ ಸ್ಟೋರ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಲ್ಯಾಪ್ಟಾಪ್, ಐಫೋನ್ ದೋಚಿದ್ದ ಕೃತ್ಯ ನಡೆದಿತ್ತು. ಅದೇ ದಿನ ಮಧ್ಯಾಹ್ನ ಲೇಡಿಹಿಲ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 40 ಸಾವಿರ ನಗದು, ದಾಖಲೆಗಳನ್ನು ಹೊಂದಿದ್ದ ಬ್ಯಾಗನ್ನು ಕಳವು ಮಾಡಲಾಗಿತ್ತು.


ಒಂದೇ ಮಾದರಿಯ ಪ್ರಕರಣ ಒಂದೇ ದಿನ ನಡೆದಿದ್ದು ಇದರಲ್ಲಿ ಒಂದೇ ತಂಡದ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಓಜಿ ಕೊಪ್ಪಮ್ ಎನ್ನುವ ಉತ್ತರ ಪ್ರದೇಶ ಮೂಲದ ಗ್ಯಾಂಗ್ ಇದರ ಹಿಂದಿದೆ ಎನ್ನುವ ಸಂಶಯ ಪೊಲೀಸರಲ್ಲಿದೆ. ಈ ಹಿಂದೆ ಇದೇ ತಂಡದ ಕೆಲವು ಸದಸ್ಯರು ಕರ್ನಾಟಕದ ವಿವಿಧ ಕಡೆಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಸೆರೆಸಿಕ್ಕಿದ್ದರು. ಆನಂತರ ಬಿಡುಗಡೆಯಾಗಿ ಊರು ಬದಲಿಸಿ ಕೃತ್ಯ ನಡೆಸುತ್ತಿದ್ಧಾರೆಯೇ ಎನ್ನುವ ಶಂಕೆ ಮೂಡಿದೆ.
ಮಂಗಳೂರಿನ ಪ್ರಕರಣದ ಬೆನ್ನಲ್ಲೇ ಉಡುಪಿಯಲ್ಲೂ ಅದೇ ಮಾದರಿಯ ಕೃತ್ಯ ನಡೆದಿತ್ತು. ಪಾರ್ಕ್ ಮಾಡಿಟ್ಟು ಹೋಗಿದ್ದ ಕಾರಿನಿಂದ ಲ್ಯಾಪ್ಟಾಪ್ ಅನ್ನು ಕಳವು ಮಾಡಲಾಗಿತ್ತು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ ಶೆಟ್ಟಿ ಎಂಬವರು ಕಾರಿನಲ್ಲಿ ಕೊಲ್ಲೂರು, ಕಟೀಲು ಪ್ರವಾಸ ಮುಗಿಸಿ ಉಡುಪಿಗೆ ಬಂದಿದ್ದರು. ಉಡುಪಿ ಪೇಟೆಯಲ್ಲಿ ಕಾರು ಪಾರ್ಕ್ ಮಾಡಿ, ಫುಡ್ ಪಾರ್ಸೆಲ್ ತರಲೆಂದು ತೆರಳಿದ್ದರು. ಹಿಂತಿರುಗಿ ಬಂದಾಗ ಕಾರಿನ ಸೀಟಿನಲ್ಲಿ ಇಟ್ಟಿದ್ದ ಲ್ಯಾಪ್ಟಾಪ್ ಇರಲಿಲ್ಲ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read: ರಸ್ತೆ ಬದಿ ನಿಲ್ಲಿಸಿದ್ದ ಕಾರಿನಿಂದ ನಗದು, ವಿದೇಶಿ ಕರೆನ್ಸಿ, ದಾಖಲೆಗಳಿದ್ದ ಬ್ಯಾಗ್ ಕಳವು
The city police suspect that a gang of Uttar Pradesh origin is going rampant in the city, stealing valuables by breaking open the windows of parked cars. Some days ago, a laptop, iPhone and other valuables were stolen by breaking open the rear window glass from a parked car at Urwa Store in the city. On the same day at around 1.15 pm Rs 40,000 cash and a bag containing documents was stolen by breaking open the window glass of a parked car at Light House Hill Road.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm