ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm