ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm