ಬ್ರೇಕಿಂಗ್ ನ್ಯೂಸ್
10-08-21 11:22 pm Mangaluru Correspondent ಕ್ರೈಂ
ಮಂಜೇಶ್ವರ, ಆಗಸ್ಟ್ 10: ಹೊಸಂಗಡಿಯ ರಾಜಧಾನಿ ಜುವೆಲ್ಲರಿ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾರ್ಕಳ ತಾಲೂಕಿನ ಹೊಸ್ಮಾರು ನಿವಾಸಿ ಮಹಮ್ಮದ್ ರಿಯಾಜ್ (32) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ಮತ್ತು ಮಂಜೇಶ್ವರ ಇನ್ ಸ್ಪೆಕ್ಟರ್ ಸಂತೋಷ್ ಕುಮಾರ್ ಅವರ ತಂಡ ಚಿಕ್ಕಮಗಳೂರಿನ ಕುದ್ರೆಮುಖ ಬೆಟ್ಟಗಳ ಬಳಿಯಲ್ಲಿ ಪತ್ತೆ ಮಾಡಿ ಬಂಧಿಸಿದೆ.
ಇತ್ತೀಚೆಗೆ ಕಾಸರಗೋಡು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯಾದ ತೃಶ್ಶೂರು ಮೂಲದ ಕೊಡುಂಗಲ್ಲೂರು ನಿವಾಸಿ ಸತ್ಯೇಶ್ ಕೆಪಿ ಅಲಿಯಾಸ್ ಕಿರಣ್ (35) ಎಂಬಾತನನ್ನು ಬಂಧಿಸಿದ್ದರು. ಈತನ ಜೊತೆಗಿದ್ದ ಇತರ ಐವರು ಸೇರಿ ಡಕಾಯಿತಿ ನಡೆಸಿದ್ದರು ಎನ್ನಲಾಗಿತ್ತು.
ಜುಲೈ 26ರಂದು ರಾತ್ರಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಅಬ್ದುಲ್ಲಾ ಎಂಬಾತನನ್ನು ಕಟ್ಟಿ ಹಾಕಿ, ಗೋಣಿಚೀಲದಲ್ಲಿ ತುಂಬಿಸಿಟ್ಟು ಜುವೆಲ್ಲರಿ ದರೋಡೆ ನಡೆಸಿದ್ದರು. ಹೊರಗಡೆ ಭಾರೀ ಮಳೆ ಇದ್ದುದರಿಂದ ಹೊಸಂಗಡಿ ಜಂಕ್ಷನ್ನಲ್ಲಿ ರಸ್ತೆ ಬದಿಯಲ್ಲೇ ಇರುವ ಜುವೆಲ್ಲರಿಯಲ್ಲಿ ದರೋಡೆ ನಡೆದಿದ್ದು ಯಾರಿಗೂ ಅರಿವಿಗೆ ಬಂದಿರಲಿಲ್ಲ. 15 ಕೇಜಿ ಬೆಳ್ಳಿ ಆಭರಣಗಳು ಮತ್ತು ನಾಲ್ಕು ಲಕ್ಷ ರೂಪಾಯಿ ನಗದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಅದೇ ದಿನ ನಸುಕಿನಲ್ಲಿ ಇನ್ನೋವಾ ಕಾರಿನಲ್ಲಿ ಒಂದು ತಂಡ ಹಿಂತಿರುಗುತ್ತಿದ್ದಾಗ ಉಳ್ಳಾಲದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದರು. ಬಳಿಕ ಕಾರು ಬಿಟ್ಟು ಏಳು ಜನರಿದ್ದ ತಂಡ ಪರಾರಿಯಾಗಿತ್ತು. ಕಾರಿನಲ್ಲಿ ಏಳು ಕೇಜಿ ಬೆಳ್ಳಿ ಆಭರಣ ಮತ್ತು ಎರಡು ಲಕ್ಷ ನಗದು ಪತ್ತೆಯಾಗಿತ್ತು.
ಡಕಾಯಿತಿ ಪ್ರಕರಣದಲ್ಲಿ ಕರ್ನಾಟಕ ಮತ್ತು ಕೇರಳದ ಕುಖ್ಯಾತ ದರೋಡೆಕೋರರು ಪಾಲ್ಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿತ್ತು. ಮೇಲ್ನೋಟಕ್ಕೆ ಕೃತ್ಯ ನಡೆದ ಬಳಿಕ ಸಿಕ್ಕಿದ್ದನ್ನು ಸಮಾನವಾಗಿ ಹಂಚಿಕೊಂಡು ಎರಡೂ ತಂಡ ಪರಾರಿಯಾಗಿತ್ತು ಎನ್ನಲಾಗಿತ್ತು. ಇದೀಗ ಕಾಸರಗೋಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇತ್ತ ಉಳ್ಳಾಲದ ಮೂಲಕ ಪರಾರಿಯಾಗಿರುವ ತಂಡದ ಪತ್ತೆಗೆ ಉಳ್ಳಾಲ ಪೊಲೀಸರು ಬಲೆ ಬೀಸಿದ್ದಾರೆ. ಆದರೆ, ಈವರೆಗೂ ಯಾರನ್ನೂ ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿಲ್ಲ.
The investigating team arrested one more accused in the Rajdhani Jewellery dacoity case of Hosangady at Manjeshwar. The total number of arrested rose to two with this arrest. The arrested accused is identified as Mohammed Riyaz (32), resident of Hosmar in Karkala taluk. He was arrested from Kudremukh area by the team led by Kasargod DySP Balakrishnan Nair and Manjeshwar station inspector Santhosh Kumar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm