ಬ್ರೇಕಿಂಗ್ ನ್ಯೂಸ್
14-08-21 01:38 pm Headline Karnataka News Network ಕ್ರೈಂ
ಚಾಮರಾಜನಗರ, ಆ.14: ಪ್ರೀತಿಸಿದ ಯುವತಿ ತನ್ನನ್ನು ನಿರಾಕರಿಸುತ್ತಿದ್ದಳು ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡೇ ಬೆಂಕಿ ಹಚ್ಚಿಕೊಂಡು ಇಬ್ಬರೂ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಶ್ರೀನಿವಾಸ್ (23) ಹಾಗೂ ಅದೇ ಗ್ರಾಮದ ಕಾಂಚನಾ (22) ಮೃತಪಟ್ಟವರು.
ಕಾರಿನ ಒಳಭಾಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಬಗ್ಗೆ ಪೊಲೀಸರು ಶಂಕಿಸಿದ್ದು, ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದೇ ಸೀಟಿನಲ್ಲಿ ಇಬ್ಬರ ತಲೆಬುರುಡೆಗಳು ಮಾತ್ರ ಕಂಡುಬಂದಿವೆ.
ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದರೆ, ಶ್ರೀನಿವಾಸ್ ಕ್ಯಾಬ್ ಚಾಲಕನಾಗಿದ್ದ. ಈ ಹಿಂದೆ ಶಿಕ್ಷಣ ಪಡೆಯುತ್ತಿದ್ದಾಗ ಇಬ್ಬರೂ ಸಹಪಾಠಿಗಳಾಗಿದ್ದರು. ಶ್ರೀನಿವಾಸ್, ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಯುವತಿಯ ಕುಟುಂಬದವರಿಗೆ ಇದು ಇಷ್ಟವಿರಲಿಲ್ಲ. ಹಾಗಾಗಿ, ಕಾಂಚನಾ ಕೂಡ ಶ್ರೀನಿವಾಸ್ ನಿಂದ ದೂರ ಇದ್ದಳು ಎನ್ನಲಾಗುತ್ತಿದೆ.



ಇದರಿಂದ ಬೇಸತ್ತಿದ್ದ ಶ್ರೀನಿವಾಸ್, ಕಾಂಚನಾರನ್ನು ಕಾರಿನಲ್ಲಿ ಕೂರಿಸಿಕೊಂಡು ಮಾಂಬಳ್ಳಿಯಿಂದ ಕಿನಕಳ್ಳಿಗೆ ಹೋಗುವ ಮುಖ್ಯ ರಸ್ತೆಯಿಂದ ಎರಡು ಕಿ.ಮೀ. ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಒಳಗೆ ಕುಳಿತುಕೊಂಡೇ ಬೆಂಕಿ ಹಚ್ಚಿಕೊಂಡಿದ್ದಾರೆನ್ನಲಾಗಿದೆ. ಪಕ್ಕದ ಜಮೀನಿನಲ್ಲಿ ಹಸು ಮೇಯಿಸಿಕೊಂಡಿದ್ದ ವ್ಯಕ್ತಿಯೊಬ್ಬರು, ಕಾರು ಉರಿಯುತ್ತಿದ್ದುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಬಂದಾಗ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರಬಹುದು ಎಂದು ಭಾವಿಸಿದ್ದರು. ಆದರೆ, ಹತ್ತಿರ ಹೋಗಿ ನೋಡಿದಾಗ ಒಳಗಡೆ ಎರಡು ತಲೆ ಬುರುಡೆಗಳು ಕಂಡುಬಂದಿದ್ದು ಕಾರಿನ ಬಾಗಿಲು ಲಾಕ್ ಆಗಿತ್ತು.
ಆರಂಭದಲ್ಲಿ ಪ್ರೇಮಿಗಳ ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ, ವಿಚಾರಣೆ ನಡೆಸಿದಾಗ ಶ್ರೀನಿವಾಸ್ ಅವರನ್ನು ಮದುವೆಯಾಗುವುದು ಕಾಂಚನಾ ಕುಟುಂಬದವರಿಗೆ ಇಷ್ಟ ಇರಲಿಲ್ಲ ಹಾಗಾಗಿ ಕಾಂಚನಾ, ದೂರವಾಗಿದ್ದರು ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಇದೇ ವಿಚಾರದಲ್ಲಿ ಮೂರು ತಿಂಗಳ ಹಿಂದೆಯೂ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm