ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm