ಬ್ರೇಕಿಂಗ್ ನ್ಯೂಸ್
06-09-20 01:54 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನ ಸಿಸಿಬಿ ಕಚೇರಿಯ ಮುಂದೆ ಇಂದು ಬೆಳ್ಳಂಬೆಳಗ್ಗೆ ಹೈಡ್ರಾಮಾ ಸೃಷ್ಟಿಯಾಗಿದ್ದು,ಬೈಕ್ ನಲ್ಲಿ ಬಂದ ಯುವಕನೊಬ್ಬ ಡ್ರಗ್ಸ್ ದಂಧೆಯಲ್ಲಿ ನಾನೂ ಭಾಗಿಯಾಗಿದ್ದೇನೆ, ನಟಿ ರಾಗಿಣಿ ಮತ್ತು ನಾನು ಕ್ಲೋಸ್ ಇದ್ದೇವೆ. ಅವರ ಜೊತೆ ಫೋಟೋ ದಲ್ಲಿ ಇರುವುದು ನಾನೇ. ನಿಮಗೆ ಬೇಕಾದ 13ನೇ ಆರೋಪಿ ನಾನೇ…ಅರೆಸ್ಟ್ ಮಾಡಿ…ಎಂದು ಹೇಳಿ ಕೆಲ ಕಾಲ ಗೊಂದಲ ಸೃಷ್ಟಿಸಿದ್ದಾನೆ.
ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ. ಸದ್ಯ ಇವರು ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದು, ಈ ನಡುವೆಯೇ ಯುವಕ ಕಚೇರಿ ಎದುರು ಬಂದು ಹೈಡ್ರಾಮಾ ಮಾಡಿದ್ದಾನೆ. ಇಲ್ಲಿಯವರೆಗೆ ಒಟ್ಟು 12 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, 13ನೆಯವ ನಾನೇ ಎಂದಿರುವ ಯುವಕ, ನನ್ನನ್ನು ಅರೆಸ್ಟ್ ಮಾಡಿ ಎಂದು ಗೋಗರೆದಿದ್ದಾನೆ! ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಯುವಕನ ಹೆಸರು ಅನಿರುದ್ಧ್ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನ ಜಯನಗರ ಆರ್ಟಿಒ ಕಚೇರಿಯ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಈತ ರಾಗಿಣಿ ಆಪ್ತ ರವಿಶಂಕರ್ನ ಸ್ನೇಹಿತ ಎಂದು ತಿಳಿದುಬಂದಿದೆ. ಇದೇ ಆರ್ಟಿಒ ಕಚೇರಿಯಲ್ಲಿ ರವಿಶಂಕರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದನು. ಸಿಸಿಬಿ ಪೊಲೀಸ್ ಕಚೇರಿಗೆ ಬಂದಿದ್ದ ಸಂದರ್ಭದಲ್ಲಿ ಅನಿರುದ್ಧ್ ಡ್ರಗ್ಸ್ ಸೇವನೆ ಮಾಡಿದ್ದ ಎಂದಿದ್ದಾರೆ ಪೊಲೀಸರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm