ಬ್ರೇಕಿಂಗ್ ನ್ಯೂಸ್
17-08-21 01:50 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 17: ಆಸ್ಪತ್ರೆಯಲ್ಲಿದ್ದ ಪತಿಯ ನೆರವಿಗೆ ಬಂದಿದ್ದ ಪತ್ನಿ ಹಾಗೂ ಆಕೆಯ ತಂಗಿಯ ಮೇಲೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದಿನ ಗಾಂಧಿ ಆಸ್ಪತ್ರೆಯಲ್ಲಿ ನಡೆದಿದೆ.
ಸಂತ್ರಸ್ತೆಯ ಪುತ್ರ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಚಿಕಿತ್ಸೆಗೆಂದು ಬಂದಿದ್ದ ತಾಯಿ ಹಾಗೂ ಚಿಕ್ಕಮ್ಮ ಆಸ್ಪತ್ರೆಯಲ್ಲಿ ಇರಲಿಲ್ಲ. ಇಬ್ಬರನ್ನು ಹುಡುಕಾಡಿದಾಗ ಆಕೆಯ ಚಿಕ್ಕಮ್ಮ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದು ಕಂಡುಬಂದಿದೆ. ಆಕೆಯನ್ನು ಮೆಹಬೂಬನಗರಕ್ಕೆ ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ನಡೆದಿರುವ ದೌರ್ಜನ್ಯ ವಿವರಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಲಕಲುಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೆಹಬೂಬನಗರ ಜಿಲ್ಲೆಯ ವ್ಯಕ್ತಿಯನ್ನು ಆಗಸ್ಟ್ 5 ರಂದು ಮೂತ್ರಪಿಂಡ ಕಾಯಿಲೆಯ ಚಿಕಿತ್ಸೆಗಾಗಿ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಮತ್ತು ಆಕೆಯ ಸಹೋದರಿ ರೋಗಿಗೆ ಸಹಾಯಕ್ಕಾಗಿ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯ ರೇಡಿಯೋಗ್ರಾಫರ್, ಆರೋಪಿ ಉಮಾಮಹೇಶ್ವರ್ ಮಹಿಳೆಯ ಸಂಬಂಧಿಯಾಗಿದ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಉಮಾಮಹೇಶ್ವರ್ ಈ ತಿಂಗಳ 8ರಂದು ಮಹಿಳೆಯರನ್ನು ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿ ವೈನ್ನಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿದ್ದಾನೆ. ಅವರು ಪ್ರಜ್ಞಾಹೀನ ಸ್ಥಿತಿಗೆ ಹೋದ ನಂತರ ಉಮಾಮಹೇಶ್ವರ ಇತರರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪವಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿಮ್ಮ ತಾಯಿ ಹಾಗೂ ಚಿಕ್ಕಮ್ಮನನ್ನು ಕೊಲ್ಲುವುದಾಗಿ ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದನಂತೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿ ಉಮಾಮಹೇಶ್ವರ್ ಸೇರಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಇನ್ನೊಬ್ಬ ಮಹಿಳೆ ನಾಪತ್ತೆಯಾಗಿದ್ದು, ಆಕೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ಉಮಾಮಹೇಶ್ವರ್ ಮತ್ತು ಇತರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಸ್ಪತ್ರೆಯ ಅಧೀಕ್ಷಕ ಡಾ.ರಾಜಾರಾವ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.
In a shocking incident, a lab technician at Gandhi Hospital allegedly raped two sisters, aged 38 and 40, from Mahabubnagar district and confined one of them in a room for four days. The technician’s friend also allegedly raped one of the sisters.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm