ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm