ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm