ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm