ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm