ಬ್ರೇಕಿಂಗ್ ನ್ಯೂಸ್
21-08-21 06:39 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21: ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಪ್ರಸಂಗ ನಡೆದಿದ್ದು, ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ತನ್ನನ್ನು ಶ್ರೀನಿವಾಸ ಕೆ. ಎಂದು ಪರಿಚಯಿಸಿದ್ದ ವ್ಯಕ್ತಿ ಅದಕ್ಕಾಗಿ ಏಮ್ಸ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ಒಂದನ್ನು ತೋರಿಸಿದ್ದ. ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್ ರೂಮ್ ಬಾಡಿಗೆ ನಾಲ್ಕು ಸಾವಿರ ರೂಪಾಯಿ ಆಗಬೇಕಿತ್ತು. ಈ ಬಗ್ಗೆ ಹೊಟೇಲಿನ ಮಾಲಕರೂ, ಮಂಗಳೂರು ಹೊಟೇಲ್ ಅಸೋಸಿಯೇಶನಲ್ಲಿ ಖಜಾಂಚಿಯೂ ಆಗಿರುವ ಅಬ್ರಾರ್ ಬಂದರು ಪೊಲೀಸರಿಗೆ ದೂರು ನೀಡಿದ್ದರು. ಆನಂತರ ಆತ ನೀಡಿದ್ದ ಐಡಿ ಕಾರ್ಡನ್ನು ಹೊಟೇಲ್ ಅಸೋಸಿಯೇಶನ್ ಗ್ರೂಪಲ್ಲಿ ಷೇರ್ ಮಾಡಿದ್ದರು.


ಈ ವೇಳೆ, ಅದೇ ವ್ಯಕ್ತಿ ನವಭಾರತ ವೃತ್ತದಲ್ಲಿರುವ ಪ್ಯಾಪಿಲಾನ್ ಪ್ಯಾಲೇಸ್ ಎನ್ನುವ ಹೊಟೇಲಿನಲ್ಲಿಯೂ ಇದೇ ರೀತಿ ಮೋಸ ಮಾಡಿದ್ದು ತಿಳಿದುಬಂದಿದೆ. ಸಿಟಿ ವಾಕ್ ಹೊಟೇಲಿಗೆ ಬರುವುದಕ್ಕೂ ಮುನ್ನ ಪ್ಯಾಪಿಲಾನ್ ಹೊಟೇಲಿಗೆ ತೆರಳಿದ್ದ. ಅಲ್ಲಿ ಒಂದಷ್ಟು ದಿನ ಇದ್ದುಕೊಂಡು ಬಳಿಕ ಅಲ್ಲಿಂದ ಹಣ ಕೊಡದೆ ತೆರಳಿದ್ದ. ಈ ವಿಚಾರ ತಿಳಿಯುತ್ತಲೇ ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತು ಜನರಲ್ ಸೆಕ್ರೆಟರಿ ನಿಶಾಂಕ್ ಸುವರ್ಣ, ಪ್ಯಾಪಿಲಾನ್ ಹೊಟೇಲಿಗೆ ಭೇಟಿ ನೀಡಿದ್ದು, ಬಂದರು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಎಸಿಪಿ ಪಿಎ ಹೆಗಡೆ ಮತ್ತು ಬಂದರು ಇನ್ ಸ್ಪೆಕ್ಟರ್ ರಾಘವೇಂದ್ರ ನಕಲಿ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಿದಾಗ ಆತನಲ್ಲಿರುವುದು ಫೇಕ್ ಐಡಿಯೆಂದು ಗೊತ್ತಾಗಿದೆ. ಅಲ್ಲದೆ, ಈ ಹಿಂದೆ ಇದೇ ವ್ಯಕ್ತಿ ತಮಿಳುನಾಡಿನ ಸೇಲಂನಲ್ಲಿ ನಲಂದಾ ಎನ್ನುವ ಹೊಟೇಲ್ ನಲ್ಲಿ ಉಳಿದುಕೊಂಡು 15 ಸಾವಿರ ರೂ. ಮೋಸ ಮಾಡಿದ್ದ ಎನ್ನುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Fake Doctor with Fake AIMS Medical ID held in Mangalore. The incident came to light after he escaped from a lodge in the city without making payment. The Bunder police have arrested the accused and have stated that he has done the same pattern with many lodges in India showing fake medical ID.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm