ಬ್ರೇಕಿಂಗ್ ನ್ಯೂಸ್
21-08-21 06:39 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21: ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಪ್ರಸಂಗ ನಡೆದಿದ್ದು, ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ತನ್ನನ್ನು ಶ್ರೀನಿವಾಸ ಕೆ. ಎಂದು ಪರಿಚಯಿಸಿದ್ದ ವ್ಯಕ್ತಿ ಅದಕ್ಕಾಗಿ ಏಮ್ಸ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ಒಂದನ್ನು ತೋರಿಸಿದ್ದ. ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್ ರೂಮ್ ಬಾಡಿಗೆ ನಾಲ್ಕು ಸಾವಿರ ರೂಪಾಯಿ ಆಗಬೇಕಿತ್ತು. ಈ ಬಗ್ಗೆ ಹೊಟೇಲಿನ ಮಾಲಕರೂ, ಮಂಗಳೂರು ಹೊಟೇಲ್ ಅಸೋಸಿಯೇಶನಲ್ಲಿ ಖಜಾಂಚಿಯೂ ಆಗಿರುವ ಅಬ್ರಾರ್ ಬಂದರು ಪೊಲೀಸರಿಗೆ ದೂರು ನೀಡಿದ್ದರು. ಆನಂತರ ಆತ ನೀಡಿದ್ದ ಐಡಿ ಕಾರ್ಡನ್ನು ಹೊಟೇಲ್ ಅಸೋಸಿಯೇಶನ್ ಗ್ರೂಪಲ್ಲಿ ಷೇರ್ ಮಾಡಿದ್ದರು.
ಈ ವೇಳೆ, ಅದೇ ವ್ಯಕ್ತಿ ನವಭಾರತ ವೃತ್ತದಲ್ಲಿರುವ ಪ್ಯಾಪಿಲಾನ್ ಪ್ಯಾಲೇಸ್ ಎನ್ನುವ ಹೊಟೇಲಿನಲ್ಲಿಯೂ ಇದೇ ರೀತಿ ಮೋಸ ಮಾಡಿದ್ದು ತಿಳಿದುಬಂದಿದೆ. ಸಿಟಿ ವಾಕ್ ಹೊಟೇಲಿಗೆ ಬರುವುದಕ್ಕೂ ಮುನ್ನ ಪ್ಯಾಪಿಲಾನ್ ಹೊಟೇಲಿಗೆ ತೆರಳಿದ್ದ. ಅಲ್ಲಿ ಒಂದಷ್ಟು ದಿನ ಇದ್ದುಕೊಂಡು ಬಳಿಕ ಅಲ್ಲಿಂದ ಹಣ ಕೊಡದೆ ತೆರಳಿದ್ದ. ಈ ವಿಚಾರ ತಿಳಿಯುತ್ತಲೇ ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತು ಜನರಲ್ ಸೆಕ್ರೆಟರಿ ನಿಶಾಂಕ್ ಸುವರ್ಣ, ಪ್ಯಾಪಿಲಾನ್ ಹೊಟೇಲಿಗೆ ಭೇಟಿ ನೀಡಿದ್ದು, ಬಂದರು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಎಸಿಪಿ ಪಿಎ ಹೆಗಡೆ ಮತ್ತು ಬಂದರು ಇನ್ ಸ್ಪೆಕ್ಟರ್ ರಾಘವೇಂದ್ರ ನಕಲಿ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಿದಾಗ ಆತನಲ್ಲಿರುವುದು ಫೇಕ್ ಐಡಿಯೆಂದು ಗೊತ್ತಾಗಿದೆ. ಅಲ್ಲದೆ, ಈ ಹಿಂದೆ ಇದೇ ವ್ಯಕ್ತಿ ತಮಿಳುನಾಡಿನ ಸೇಲಂನಲ್ಲಿ ನಲಂದಾ ಎನ್ನುವ ಹೊಟೇಲ್ ನಲ್ಲಿ ಉಳಿದುಕೊಂಡು 15 ಸಾವಿರ ರೂ. ಮೋಸ ಮಾಡಿದ್ದ ಎನ್ನುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Fake Doctor with Fake AIMS Medical ID held in Mangalore. The incident came to light after he escaped from a lodge in the city without making payment. The Bunder police have arrested the accused and have stated that he has done the same pattern with many lodges in India showing fake medical ID.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm