ಬ್ರೇಕಿಂಗ್ ನ್ಯೂಸ್
25-08-21 05:25 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 25: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನ ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನ ಕುಡುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹರಿದು ಮುಕ್ಕಿದೆ.
ಸ್ನೇಹಿತನ ಜೊತೆಗೆ ಕುಳಿತಿದ್ದ ವೇಳೆ, ಎಣ್ಣೆ ಪಾರ್ಟಿ ಮಾಡ್ತಿದ್ದ ಕಾಮುಕರು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ ಗೆ ಬಂದಿದ್ದರು. ಅಲ್ಲಿನ ಮೂಲೆಯಲ್ಲಿ ಇಬ್ಬರೂ ಕುಳಿತಿದ್ದ ವೇಳೆ ಅಲ್ಲಿಯೇ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಿದ್ದ ಐವರ ಗ್ಯಾಂಗ್ ವಿದ್ಯಾರ್ಥಿನಿಯ ಮೇಲೆರಗಿದ್ದಾರೆ.

ಈ ವೇಳೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿನಿಯ ಸ್ನೇಹಿತನಿಗೆ ಗ್ಯಾಂಗ್ ಹಲ್ಲೆ ಮಾಡಿದ್ದು ಕಲ್ಲಿನಿಂದ ಹೊಡೆದು ಅಟ್ಟಿದ್ದಾರೆ. ಕಲ್ಲಿನೇಟಿನಿಂದ ಸ್ನೇಹಿತ ಕುಸಿದು ಬಿದ್ದ ಬಳಿಕ ವಿದ್ಯಾರ್ಥಿನಿಯನ್ನ ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ನಾಲ್ಕರಿಂದ ಐದು ಮಂದಿಯಿದ್ದ ಗ್ಯಾಂಗ್ ಅತ್ಯಾಚಾರ ಮಾಡಿದ್ದಾರೆ. ಬಳಿಕ ಎಚ್ಚತ್ತುಕೊಂಡ ಹುಡುಗಿಯ ಸ್ನೇಹಿತ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಅಸ್ವಸ್ಥಳಾಗಿ ಬಿದ್ದಿದ್ದ ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಾಯಗೊಂಡ ಸಂತ್ರಸ್ತೆಯ ಸ್ನೇಹಿತನ ಹೇಳಿಕೆಯನ್ನ ದಾಖಲು ಮಾಡಿದ್ದಾರೆ.
ಎಸಿಪಿ ಶಶಿಧರ್ ಹಾಗೂ ಆಲನಹಳ್ಳಿ ಠಾಣಾ ಇನ್ಸ್ಪೆಕ್ಟರ್ ರವಿಶಂಕರ್ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಆಗಮಿಸಿದ್ದು ಘಟನೆಯನ್ನ ಖಂಡಿಸಿದ್ದಾರೆ.
A student of a private college in Mysore has been gang-raped by 6 boys at a deserted place. The girl had come with her friend to the spot. Six boys assaulted the girl and then raped her.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm