ಬ್ರೇಕಿಂಗ್ ನ್ಯೂಸ್
25-08-21 05:25 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 25: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನ ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನ ಕುಡುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹರಿದು ಮುಕ್ಕಿದೆ.
ಸ್ನೇಹಿತನ ಜೊತೆಗೆ ಕುಳಿತಿದ್ದ ವೇಳೆ, ಎಣ್ಣೆ ಪಾರ್ಟಿ ಮಾಡ್ತಿದ್ದ ಕಾಮುಕರು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ ಗೆ ಬಂದಿದ್ದರು. ಅಲ್ಲಿನ ಮೂಲೆಯಲ್ಲಿ ಇಬ್ಬರೂ ಕುಳಿತಿದ್ದ ವೇಳೆ ಅಲ್ಲಿಯೇ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಿದ್ದ ಐವರ ಗ್ಯಾಂಗ್ ವಿದ್ಯಾರ್ಥಿನಿಯ ಮೇಲೆರಗಿದ್ದಾರೆ.

ಈ ವೇಳೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿನಿಯ ಸ್ನೇಹಿತನಿಗೆ ಗ್ಯಾಂಗ್ ಹಲ್ಲೆ ಮಾಡಿದ್ದು ಕಲ್ಲಿನಿಂದ ಹೊಡೆದು ಅಟ್ಟಿದ್ದಾರೆ. ಕಲ್ಲಿನೇಟಿನಿಂದ ಸ್ನೇಹಿತ ಕುಸಿದು ಬಿದ್ದ ಬಳಿಕ ವಿದ್ಯಾರ್ಥಿನಿಯನ್ನ ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ನಾಲ್ಕರಿಂದ ಐದು ಮಂದಿಯಿದ್ದ ಗ್ಯಾಂಗ್ ಅತ್ಯಾಚಾರ ಮಾಡಿದ್ದಾರೆ. ಬಳಿಕ ಎಚ್ಚತ್ತುಕೊಂಡ ಹುಡುಗಿಯ ಸ್ನೇಹಿತ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಅಸ್ವಸ್ಥಳಾಗಿ ಬಿದ್ದಿದ್ದ ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಾಯಗೊಂಡ ಸಂತ್ರಸ್ತೆಯ ಸ್ನೇಹಿತನ ಹೇಳಿಕೆಯನ್ನ ದಾಖಲು ಮಾಡಿದ್ದಾರೆ.
ಎಸಿಪಿ ಶಶಿಧರ್ ಹಾಗೂ ಆಲನಹಳ್ಳಿ ಠಾಣಾ ಇನ್ಸ್ಪೆಕ್ಟರ್ ರವಿಶಂಕರ್ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಆಗಮಿಸಿದ್ದು ಘಟನೆಯನ್ನ ಖಂಡಿಸಿದ್ದಾರೆ.
A student of a private college in Mysore has been gang-raped by 6 boys at a deserted place. The girl had come with her friend to the spot. Six boys assaulted the girl and then raped her.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm