ಬ್ರೇಕಿಂಗ್ ನ್ಯೂಸ್
26-08-21 12:00 pm Headline Karnataka News Network ಕ್ರೈಂ
ಮಲಪ್ಪುರಂ, ಆಗಸ್ಟ್ 26: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಾಮತೃಷೆಗೆ ಬಳಸಿಕೊಂಡ ಪಾಪಿ ತಂದೆಯೊಬ್ಬನ ಅಮಾನವೀಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಮಂಜೇರಿ ಪೊಕ್ಸೊ ವಿಶೇಷ ನ್ಯಾಯಾಲಯ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಜೊತೆಗೆ 3 ಲಕ್ಷ ದಂಡ ಕಟ್ಟುವಂತೆ ಸೂಚಿಸಿದೆ.
55 ವರ್ಷದ ವ್ಯಕ್ತಿಯ ವಿರುದ್ಧದ ಎರಡು ಪ್ರಕರಣಗಳಲ್ಲಿ ಮೊದಲನೆಯ ಪ್ರಕರಣದ ತೀರ್ಪನ್ನು ಮಂಜೇರಿಯ ತ್ವರಿತಗತಿ ವಿಶೇಷ ನ್ಯಾಯಾಲಯ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆ 376, 511 (ಅತ್ಯಾಚಾರ ಯತ್ನ), 254 (ಮಹಿಳೆಯ ಮೇಲೆ ದೌರ್ಜನ್ಯ), 506 (2) (ಕ್ರಿಮಿನಲ್ ಬೆದರಿಕೆ) ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಅಪರಾಧಿಗೆ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

2014-2016ರ ನಡುವೆ ಪತ್ನಿಯೊಂದಿಗೆ ಜಗಳವಾಡಿದ ನಂತರ ಅಪರಾಧಿ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಮಕ್ಕಳು ತಮ್ಮ ತಾಯಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 2016ರ ಮಾರ್ಚ್ನಲ್ಲಿ, 15 ಮತ್ತು 17 ವರ್ಷ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಷಯ ತಿಳಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಸಿಆರ್ಪಿಸಿ ಸೆಕ್ಷನ್ 433-ಎ ಪ್ರಕಾರ, ಆರೋಪಿ ತಪ್ಪು ಮಾಡಿರುವುದು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಸಾಬೀತಾದರೆ ಡಬಲ್ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. ಯಾವ ಪ್ರಕರಣದಲ್ಲಿ ಹೆಚ್ಚು ಅವಧಿಯ ಶಿಕ್ಷೆ ವಿಧಿಸಲಾಗುತ್ತದೆಯೋ ಆ ಶಿಕ್ಷೆಯನ್ನು ಆತ ಪೂರೈಸಬೇಕಾಗುತ್ತದೆ. ಕನಿಷ್ಠ 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
In an extremely aggravated sexual assault case involving the Protection of Children from Sexual Offences (POCSO) Act, a court at Manjeri sentenced a man for imprisonment until his death for repeatedly raping two of his minor daughters.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm