ಬ್ರೇಕಿಂಗ್ ನ್ಯೂಸ್
26-08-21 12:00 pm Headline Karnataka News Network ಕ್ರೈಂ
ಮಲಪ್ಪುರಂ, ಆಗಸ್ಟ್ 26: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಾಮತೃಷೆಗೆ ಬಳಸಿಕೊಂಡ ಪಾಪಿ ತಂದೆಯೊಬ್ಬನ ಅಮಾನವೀಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಮಂಜೇರಿ ಪೊಕ್ಸೊ ವಿಶೇಷ ನ್ಯಾಯಾಲಯ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಜೊತೆಗೆ 3 ಲಕ್ಷ ದಂಡ ಕಟ್ಟುವಂತೆ ಸೂಚಿಸಿದೆ.
55 ವರ್ಷದ ವ್ಯಕ್ತಿಯ ವಿರುದ್ಧದ ಎರಡು ಪ್ರಕರಣಗಳಲ್ಲಿ ಮೊದಲನೆಯ ಪ್ರಕರಣದ ತೀರ್ಪನ್ನು ಮಂಜೇರಿಯ ತ್ವರಿತಗತಿ ವಿಶೇಷ ನ್ಯಾಯಾಲಯ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆ 376, 511 (ಅತ್ಯಾಚಾರ ಯತ್ನ), 254 (ಮಹಿಳೆಯ ಮೇಲೆ ದೌರ್ಜನ್ಯ), 506 (2) (ಕ್ರಿಮಿನಲ್ ಬೆದರಿಕೆ) ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಅಪರಾಧಿಗೆ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

2014-2016ರ ನಡುವೆ ಪತ್ನಿಯೊಂದಿಗೆ ಜಗಳವಾಡಿದ ನಂತರ ಅಪರಾಧಿ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಮಕ್ಕಳು ತಮ್ಮ ತಾಯಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 2016ರ ಮಾರ್ಚ್ನಲ್ಲಿ, 15 ಮತ್ತು 17 ವರ್ಷ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಷಯ ತಿಳಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಸಿಆರ್ಪಿಸಿ ಸೆಕ್ಷನ್ 433-ಎ ಪ್ರಕಾರ, ಆರೋಪಿ ತಪ್ಪು ಮಾಡಿರುವುದು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಸಾಬೀತಾದರೆ ಡಬಲ್ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. ಯಾವ ಪ್ರಕರಣದಲ್ಲಿ ಹೆಚ್ಚು ಅವಧಿಯ ಶಿಕ್ಷೆ ವಿಧಿಸಲಾಗುತ್ತದೆಯೋ ಆ ಶಿಕ್ಷೆಯನ್ನು ಆತ ಪೂರೈಸಬೇಕಾಗುತ್ತದೆ. ಕನಿಷ್ಠ 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
In an extremely aggravated sexual assault case involving the Protection of Children from Sexual Offences (POCSO) Act, a court at Manjeri sentenced a man for imprisonment until his death for repeatedly raping two of his minor daughters.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm