ಬ್ರೇಕಿಂಗ್ ನ್ಯೂಸ್
26-08-21 12:36 pm Mangaluru Correspondent ಕ್ರೈಂ
ಉಳ್ಳಾಲ, ಆ.26: ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರನ್ನ ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ - ಕೇರಳ ನಡುವಿನ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು RTPCR ರಿಪೋರ್ಟ್ ಇದ್ದವರನ್ನು ಮಾತ್ರ ಕರ್ನಾಟಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ತಲಪಾಡಿ ಗಡಿ ಪ್ರದೇಶದಲ್ಲೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಪಾಸಣೆ ನಡೆಸುತ್ತಿದೆ. ಈ ವೇಳೆ ನಕಲಿ RTPCR ಪರೀಕ್ಷೆ ವರದಿ ತೋರಿಸಿ ಕರ್ನಾಟಕ ಪ್ರವೇಶಿಸಿದ ಕಾಸರಗೋಡು ಜಿಲ್ಲೆಯ ನಾಲ್ವರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ ಆದಿಲ್ (25) ಮತ್ತು ಕಡಪುರ ನಿವಾಸಿ ಇಸ್ಮಾಯಿಲ್(48) ಹಾಗೂ ಬೈಕ್ ಮೂಲಕ ಬಂದು ಗಡಿ ಪ್ರವೇಶ ಮಾಡಿದ್ದ ಕಾಸರಗೋಡು, ಚೆರ್ವತ್ತೂರು ನಿವಾಸಿ ಹನೀನ್(31) ಮತ್ತು ಬಸ್ ಮೂಲಕ ಬಂದಿದ್ದ ಚೆಂಗಳ ನಿವಾಸಿ ಅಬ್ದುಲ್ ತಮೀಮ್ (19) ನನ್ನ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸರು ಎಪಿಡಮಿಕ್ ಆಕ್ಟ್, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಆರ್ ಟಿಪಿಸಿಆರ್ ಪರೀಕ್ಷೆ ವರದಿಯ ಮಾದರಿಯಲ್ಲೇ ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡು ಇವರು ಕರ್ನಾಟಕ ಪ್ರವೇಶ ಮಾಡಿದ್ದರು. ತಲಪಾಡಿ ಗಡಿಯಲ್ಲಿ ವರದಿಯನ್ನು ಪರಿಶೀಲನೆ ನಡೆಸಿದಾಗ, ನಕಲಿ ಆಗಿರುವುದು ಕಂಡುಬಂದಿದೆ.
Ullal police arrest four Keralites at Talapady for showing fake RTPCR report. The four have come through car from Kerala and when asked for Rtpcr test report it was said to be fake when examined.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm