ಬ್ರೇಕಿಂಗ್ ನ್ಯೂಸ್
26-08-21 04:34 pm Headline Karnataka News Network ಕ್ರೈಂ
ಬೆಂಗಳೂರು, ಆ.26 : ರೌಡಿಶೀಟರ್ ಜೊತೆ ಸೇರಿ ಆಹಾರ ತಯಾರಿಕಾ ಸಂಸ್ಥೆಯ ಇಬ್ಬರು ಸಿಬ್ಬಂದಿಯನ್ನು ಅಪಹರಿಸಿ 20 ಲಕ್ಷ ರೂ. ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಯುಟ್ಯೂಬ್ ಚಾನೆಲ್ ವರದಿಗಾರ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ರೌಡಿ ಶೀಟರ್ ಕುಳ್ಳ ರಮೇಶ್, ಯುಟ್ಯೂಬ್ ಚಾನೆಲ್ ವರದಿಗಾರ ಸಂತೋಷ್, ದುರ್ಗೇಶ, ಹರೀಶ್, ಅರವಿಂದ್ ಹಾಗೂ ವಿವೇಕ್ ಬಂಧಿತ ಆರೋಪಿಗಳು. ಮೂರು ದಿನಗಳ ಹಿಂದೆ ಸಾಯಿ ಫುಡ್ ಪ್ರೈ. ಲಿಮಿಟೆಡ್ ಎಂಬ ಕಂಪನಿಯ ಇಬ್ಬರು ಸಿಬ್ಬಂದಿಯ ವಾಹನವನ್ನು ಅಡ್ಡಗಟ್ಟಿ ಅವರದ್ದೇ ಕಾರಿನಲ್ಲಿ ಅಪಹರಿಸಿದ್ದರು. ಇಬ್ಬರನ್ನು ಬಿಡುಗಡೆ ಮಾಡಬೇಕಾದರೆ 20 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಇಬ್ಬರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಸಾಯಿ ಫುಡ್ ಮಾಲೀಕರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸತತ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲದಿನಗಳ ಹಿಂದೆ ಯುಟ್ಯೂಬ್ ಚಾನೆಲ್ ವರದಿಗಾರ ಸಂತೋಷ್ ಮತ್ತು ಟೀಂ ಸಾಯಿ ಫುಡ್ ತಯಾರಿಸುತ್ತಿದ್ದ ಆಹಾರ ಪದಾರ್ಥಗಳ ಗೋಡೌನ್ ಗೆ ನುಗ್ಗಿತ್ತು. ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದೀರಾ ಎಂದು ಬೆದರಿಕೆ ಹಾಕಿದ್ದರು. ಹಣ ಕೊಡದಿದ್ದರೆ ನಿಮ್ಮ ಅಕ್ರಮವನ್ನು ಯುಟ್ಯೂಬ್ಗೆ ಹಾಕುವುದಾಗಿ ಬೆದರಿಸಿದ್ದರು. ಅವಧಿ ಮುಗಿದ ಆಹಾರ ಪದಾರ್ಥಗಳು ಸಿಗದ ಕಾರಣ ಹಣ ವಸೂಲಿಗೆ ಯತ್ನಿಸಿ ವಾಪಸು ತೆರಳಿದ್ದರು. ಆನಂತರ ಅಪಹರಣ ಕೃತ್ಯ ನಡೆದಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಯುಟ್ಯೂಬ್ ಚಾನೆಲ್ ವರದಿಗಾರನ ಬೆನ್ನಟ್ಟಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ಹಲವರಿಗೆ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ, ಹಣ ಪಡೆದಿರುವುದು ತಿಳಿದುಬಂದರೆ ಹೆಚ್ಚುವರಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Bangalore Police arrests six including News Youtuber kindnap and extrotion of catering company owner.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm