ಬ್ರೇಕಿಂಗ್ ನ್ಯೂಸ್
 
            
                        27-08-21 12:31 pm Headline Karnataka News Network ಕ್ರೈಂ
 
            ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm