ಬ್ರೇಕಿಂಗ್ ನ್ಯೂಸ್
27-08-21 12:31 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm