ಬ್ರೇಕಿಂಗ್ ನ್ಯೂಸ್
27-08-21 12:31 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm